ಢಾಕಾ (PTI): ಬಾಂಗ್ಲಾದೇಶದಲ್ಲಿ ಹಿಂದೂ ಉದ್ಯಮಿಯೊಬ್ಬರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ದುಷ್ಕರ್ಮಿಗಳು, ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಶರಿಯತ್ಪುರ ಜಿಲ್ಲೆಯ ದಾಮುದ್ಯದ ಬಜಾರ್ ಬಳಿ ಬುಧವಾರ ರಾತ್ರಿ ಈ ಕೃತ್ಯ ನಡೆದಿದೆ.
ಅಂಗಡಿ ಮುಚ್ಚಿ ಮನೆಗೆ ತೆರಳುತ್ತಿದ್ದ ಖೋಕೇನ್ ಚಂದ್ರದಾಸ್ (50) ಎಂಬುವರ ಮೇಲೆ ಹಲ್ಲೆ ನಡೆಸಲಾಗಿದೆ. ಸ್ಥಳೀಯರು ಅವರನ್ನು ಢಾಕಾದ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

