HEALTH TIPS

ಲೈಂಗಿಕ ಆರೋಪ ಹೊತ್ತ ಪಂ. ಸದಸ್ಯ ರಾಜೀನಾಮೆಗೆ ಬಿಜೆಪಿ ಆಗ್ರಹ, ಪ್ರತಿಭಟನೆ

 ಪೆರ್ಲ: ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಎಣ್ಮಕಜೆ ಪಂಚಾಯತ್ ಸದಸ್ಯ ಸಿಪಿಎಂ ನೇತಾರ ಸುಧಾಕರ್ ಕೂಡಲೇ ತನ್ನ ಪಂಚಾಯತಿ ಸದಸ್ಯತ್ವಕ್ಕೆ ರಾಜಿನಾಮೆ ನೀಡಬೇಕೆಂದು ಒತ್ತಾಯಿಸಿ ಬಿಜೆಪಿ ಎಣ್ಮಕಜೆ ಪಂ. ಸಮಿತಿ ನೇತೃತ್ವ ದಲ್ಲಿ ಪ್ರತಿಭಟನೆ ಮೆರವಣಿಗೆ ನಡೆಯಿತು. 

ಬಿಜೆಪಿ ಜಿಲ್ಲಾ ಸಮಿತಿ ಉಪಾಧ್ಯಕ್ಷ ಮುರಳೀಧರ ಯಾದವ್ ಮಾತಾಡಿ ಮಹಿಳಾ ಪೀಡನೆ ಕೇಸಲ್ಲಿ ಸಿಲುಕಿರುವ ಸುಧಾಕರ ತನ್ನ ಪಂಚಾಯತಿ ಸದಸ್ಯ ಸ್ಥಾನಕ್ಕೆ ರಾಜಿನಾಮೆಯನ್ನು ನೀಡಬೇಕು. ಇಲ್ಲವಾದಲ್ಲಿ ಪಂ.ನಲ್ಲಿ  ನಡೆಯುವ ಬೋರ್ಡ್ ಮೀಟಿಂಗ್‍ಗೆ  ಪ್ರವೇಶಿಸಲು ಬಿಜೆಪಿ ಬಿಡುವುದಿಲ್ಲ ಎಂದು ಎಚ್ಚರಿಸಿದರು.

ಪ್ರತಿಭಟನಾ ಸಭೆಯಲ್ಲಿ ಬಿಜೆಪಿ ಪಂಚಾಯತಿ ಸಮಿತಿ ಅಧ್ಯಕ್ಷ ರಮಾನಂದ ಭಟ್ ಎಡಮಲೆ, ಪ್ರಧಾನ ಕಾರ್ಯದರ್ಶಿ ರಾಧಾಕೃಷ್ಣ ಭಟ್ ಪತ್ತಡ್ಕ, ನೇತಾರರಾದ ಉದಯ ಚೆಟ್ಟಿಯಾರ್, ಸುಮಿತ್ ರಾಜ್, ಉಷಾಕುಮಾರಿ, ಲಲಿತಾ ಕೇಶವ ನಾಯ್ಕ, ಮಮತಾ ರೈ, ಪಂ. ಸದಸ್ಯರಾದ ಜಗದೀಶ್ ಕುಲಾಲ್ ನಲ್ಕ, ಕೃಷ್ಣಪ್ಪ ಬಜಕೂಡ್ಲು ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.  


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries