HEALTH TIPS

ಶಬರಿಮಲೆ ಚಿನ್ನ ಕಳ್ಳತನ ಪ್ರಕರಣ: ಚಿಕಿತ್ಸೆ ಪಡೆಯುತ್ತಿದ್ದ ತಂತ್ರಿ ಆಸ್ಪತ್ರೆಯಿಂದ ಬಿಡುಗಡೆ

ತಿರುವನಂತಪುರಂ: ಚಿನ್ನ ಕಳವು ಪ್ರಕರಣದಲ್ಲಿ ಬಂಧಿತರಾಗಿ ಬಳಿಕ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಂತ್ರಿ ಅವರನ್ನು ನಿನ್ನೆ ಮಧ್ಯಾಹ್ನ ಬಿಡುಗಡೆ ಮಾಡಲಾಯಿತು. ಅವರನ್ನು ವೈದ್ಯಕೀಯ ಕಾಲೇಜಿನ ಎಂಐಸಿಯು 1 ಗೆ ದಾಖಲಿಸಲಾಗಿತ್ತು. 

ಎಲ್ಲಾ ವೈದ್ಯಕೀಯ ಪರೀಕ್ಷೆಗಳ ಫಲಿತಾಂಶಗಳು ಸಾಮಾನ್ಯ ಸ್ಥಿತಿಗೆ ಬಂದ ನಂತರ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಅವರನ್ನು ಪೂಜಾಪುರ ವಿಶೇಷ ಉಪ-ಜೈಲಿಗೆ ಕಳಿಸಲಾಯಿತು. ಅಸ್ವಸ್ಥರಾಗಿ ಮೊನ್ನೆ ತಂತ್ರಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಏತನ್ಮಧ್ಯೆ, ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ತಂತ್ರಿ ಕಂಠಾರರ್ ರಾಜೀವರ್ ಅವರ ಹಣಕಾಸಿನ ವಹಿವಾಟುಗಳನ್ನು ಎಸ್.ಐ.ಟಿ ತನಿಖೆ ಮಾಡುತ್ತದೆ. ಶಬರಿಮಲೆಯಲ್ಲಿ ನಡೆದ ಚಿನ್ನ ಕಳ್ಳತನದಿಂದ ತಂತ್ರಿ ಯಾವುದೇ ರೀತಿಯ ಆರ್ಥಿಕ ಲಾಭ ಗಳಿಸಿದ್ದಾರೆಯೇ ಎಂದು ಎಸ್.ಐ.ಟಿ. ತನಿಖೆ ನಡೆಸುತ್ತಿದೆ. ತಂತ್ರಿ ರಾಜೀವ 2007 ರಿಂದ ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದ ಪ್ರಮುಖ ಆರೋಪಿ ಉಣ್ಣಿಕೃಷ್ಣನ್ ಪೋತ್ತಿ ಅವರೊಂದಿಗೆ ಸಂಬಂಧ ಹೊಂದಿದ್ದಾರೆ. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries