ಮಂಜೇಶ್ವರ: ಇತಿಹಾಸ ಪ್ರಸಿದ್ಧ ಮೀಯಪದವು ಚಿಗುರುಪಾದೆಯ ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಫೆಬ್ರವರಿ 11 ರಂದು ಬುಧವಾರ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಇತ್ತೀಚೆಗೆ ಶ್ರೀಕ್ಷೇತ್ರದಲ್ಲಿ ಕ್ಷೇತ್ರ ಅರ್ಚಕ ವೇದಮೂರ್ತಿ ಬಾಲಸುಬ್ರಹ್ಮಣ್ಯ ಭಟ್ ಬಿಗಡೆಗೊಳಿಸಿದರು. ಈ ಸಂದರ್ಭ ಮಹಾಲಿಂಗೇಶ್ವರ ಸೇವಾ ಟ್ರಸ್ಟ್ ನ ಅಧ್ಯಕ್ಷ ಡಾ.ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ, ದೇವಸ್ಥಾನ ಮೊಕ್ತೇಸರ ವಸಂತ ಭಟ್ ತೊಟ್ಟೆತ್ತೋಡಿ, ಶ್ರೀಮಹಾಲಿಂಗೇಶ್ವರ ಸೇವಾ ಟ್ರಸ್ಟ್ ಕಾರ್ಯದರ್ಶಿ ಶ್ರೀಧರ ರಾವ್ ಆರ್.ಎಂ., ಶ್ರೀಮಹಾಲಿಂಗೇಶ್ವರ ಸೇವಾ ಸಮಿತಿ ಅಧ್ಯಕ್ಷ ಸತೀಶ್ಚಂದ್ರ ರೈ ದೇರಂಬಳ, ಕಾರ್ಯದರ್ಶಿ ಜಯರಾಮ ಚಿನಾಲ ಹಾಗೂ ವಿವಿಧ ಸಮಿತಿಪದಾಧಿಕಾರಿಗಳು, ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.

.jpg)
