ಕಾಸರಗೋಡು: ಪ್ರೆಸ್ ಕ್ಲಬ್ ಸ್ಥಾಪಕಾಧ್ಯಕ್ಷ ಕೆ.ಎಂ.ಅಹ್ಮದ್ ಸ್ಮಾರಕ ಮಾಧ್ಯಮ ಪ್ರಶಸ್ತಿ ವಿತರಣಾ ಸಮಾರಂಭ ಕಾಸರಗೋಡು ಪ್ರೆಸ್ಕ್ಲಬ್ ಸಭಾಂಗಣದಲ್ಲಿ ಜರುಗಿತು. ಕಾಸರಗೋಡು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಾಬು ಅಬ್ರಹಾಂ ಸಮಾರಂಭ ಉದ್ಘಾಟಿಸಿದರು.
ಪ್ರೆಸ್ ಕ್ಲಬ್ ಅತ್ಯುತ್ತಮ ಗ್ರಾಮೀಣ ವರದಿಗಾಗಿ ಪ್ರತಿ ವರ್ಷ ನೀಡುವ ಕೆ.ಎಂ.ಅಹಮದ್ ಸ್ಮಾರಕ ಪ್ರಶಸ್ತಿಯನ್ನು ಹಿರಿಯ ವರದಿಗಾರ ಮಾತೃಭೂಮಿ ಕಣ್ಣೂರು ಬ್ಯೂರೋದ ಎ.ಕೆ. ಶ್ರೀಜಿತ್ ಅವರಿಗೆ ಪ್ರದಾನ ಮಾಡಲಾಯಿತು. ಪ್ರೆಸ್ ಕ್ಲಬ್ ಅಧ್ಯಕ್ಷ ಸಿಜು ಕಣ್ಣನ್ ಅಧ್ಯಕ್ಷತೆ ವಹಿಸಿದ್ದರು. ಪ್ರೆಸ್ ಕ್ಲಬ್ ಮಾಜಿ ಅಧ್ಯಕ್ಷ ಟಿ.ಎ.ಶಫಿ ಕೆ.ಎಂ ಅಹಮ್ಮದ್ ಸಂಸ್ಮರಣಾ ಉಪನ್ಯಾಸ ನೀಡಿದರು. ಮುಜೀಬ್ ಅಹ್ಮದ್, ಕೆ.ವಿ. ಪದ್ಮೇಶ್, ಪ್ರೆಸ್ಕ್ಲಬ್ ನಿಕಟಪೂರ್ವ ಅಧ್ಯಕ್ಷ ಮುಹಮ್ಮದ್ ಹಾಶಿಂ ಉಪಸ್ಥಿತರಿದ್ದರು. ಪ್ರೆಸ್ಕ್ಲಬ್ ಕಾರ್ಯದರ್ಶಿ ಪ್ರದೀಪ್ ನಾರಾಯಣನ್ ಸ್ವಾಗತಿಸಿದರು. ಉಪಾಧ್ಯಕ್ಷ ಅಬ್ದುಲ್ಲಕುಞÂ ಉದುಮ ವಂದಿಸಿದರು.


