HEALTH TIPS

ಛತ್ತೀಸಗಢದಲ್ಲಿ ಎನ್‌ಕೌಂಟರ್‌: ನಕ್ಸಲ್ ಮುಖಂಡ ದೀಲಿಪ್‌ ಬೇಡ್ಜಾ ಹತ್ಯೆ

ಬಿಜಾಪುರ: ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ನಕ್ಸಲ್ ಮುಖಂಡ ದಿಲೀಪ್ ಬೇಡ್ಜಾ ಸೇರಿ ಇಬ್ಬರು ನಕ್ಸಲರು ಹತರಾಗಿದ್ದಾರೆ.

ಇಲ್ಲಿನ ವಾಯವ್ಯ ಭಾಗದ ಅರಣ್ಯ ಪ್ರದೇಶದಲ್ಲಿ ನಕ್ಸಲರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಆಧರಿಸಿ ಭದ್ರತಾ ಪಡೆಗಳು ಶನಿವಾರ ಬೆಳಗ್ಗೆ ಎನ್‌ಕೌಂಟರ್‌ ನಡೆಸಿದ್ದವು.

ಈ ವೇಳೆ ನಕ್ಸಲರು ಪ್ರತಿದಾಳಿ ನಡೆಸಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಘಟನೆಯಲ್ಲಿ ಪೊಲೀಸರಿಗೆ ಬೇಕಾಗಿದ್ದ ಹಿರಿಯ ನಕ್ಸಲ್‌ ದಿಲೀಪ್ ಬೇಡ್ಜಾ ಮೃತಪಟ್ಟಿದ್ದಾರೆ. ಹತರಾದ ಮತ್ತೊಬ್ಬ ನಕ್ಸಲ್‌ ಗುರುತು ಇನ್ನೂ ದೃಢಪಡಿಸಬೇಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಿಲೀಪ್ ಬೇಡ್ಜಾ ಸುಳಿವು ಕೊಟ್ಟವರಿಗೆ ಪೊಲೀಸ್‌ ಇಲಾಖೆ ಒಂದು ಲಕ್ಷ ರೂಪಾಯಿ ಬಹುಮಾನ ಘೋಷಣೆ ಮಾಡಿತ್ತು.

ಛತ್ತೀಸಗಢ ಪೊಲೀಸ್ ಇಲಾಖೆಯ ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಹಾಗೂ ಜಿಲ್ಲಾ ಮೀಸಲು ಪೊಲೀಸ್‌ (ಡಿಆರ್‌ಜಿ) ಸಿಆರ್‌ಪಿಎಫ್‌ನ ಕೋಬ್ರಾ ‍ಪಡೆಗಳು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದವು.

ಸ್ಥಳದಲ್ಲಿ ಹಲವು ಎಕೆ-47 ಗನ್‌ಗಳು, ರೈಫಲ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries