HEALTH TIPS

ಕಣಿಪುರ ಜಾತ್ರೋತ್ಸವ ಆರಂಭ

ಕುಂಬಳೆ: ಕುಂಬಳೆ ಕಣಿಪುರ ಶ್ರೀ ಗೋಪಾಲಕೃಷ್ಣ ಕ್ಷೇತ್ರ ವರ್ಷಾವಧಿ ಜಾತ್ರಾ ಮಹೋತ್ಸವ ಬುಧವಾರದಿಂದ ಆರಂಭಗೊಂಡಿತು.  


ಬೆಳಿಗ್ಗೆ 8 ರಿಂದ ಸೋಪಾನ ಸಂಗೀತ, 9.30 ರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ ನಡೆದು 10ಕ್ಕೆ ಶ್ರೀ ಬಲಿ, ಧ್ವಜಾರೋಹಣ ನೆರವೇರಿತು.ಬಳಿಕ ತುಲಾಭಾರ ಸೇವೆ, ಮಧ್ಯಾಹ್ನ ಮಹಾಪೂಜೆ, ನಿತ್ಯ ಬಲಿ, ಅನ್ನ ಸಂತರ್ಪಣೆ ನಡೆಯಿತು. ಸಂಜೆ 5ಕ್ಕೆ ನಡೆ ತೆರೆದು, 5.15 ರಿಂದ ಯಕ್ಷಗಾನ ಬಯಲಾಟ, 6.30ಕ್ಕೆ ದೀಪಾರಾಧನೆ, ರಾತ್ರಿ 7.30 ರಿಂದ ರಂಗಪೂಜೆ, ಉತ್ಸವ ಶ್ರೀ ಭೂತಬಲಿ ನಡೆಯಿತು. ವಾರ್ಷಿಕೋತ್ಸವದಂಗವಾಗಿ ಈ ತಿಂಗಳ 18 ರವರೆಗೆ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕøತಿಕ ಕಾರ್ಯಕ್ರಮಗಳು ಜರಗಲಿದೆ. ಉತ್ಸವಕ್ಕಿರುವ ಸಿದ್ಧತೆಗಳೆಲ್ಲಾ ಪೂರ್ಣಗೊಂಡಿರುವುದಾಗಿ ಉತ್ಸವ ಸಮಿತಿ ಪದಾಧಿಕಾರಿಗಳು ತಿಳಿಸಿದ್ದಾರೆ.


ಇದೇ ವೇಳೆ 17 ರಂದು ರಾತ್ರಿ ವಿಶೇಷ ಬೆಡಿ ಪ್ರದರ್ಶನ ನಡೆಯುವ ಮೈದಾನವನ್ನು ಶುಚಿಗೊಳಿಸಲಾಗಿದೆ. ವಿವಿಧ ಪ್ರಕರಣಗಳಿಗೆ ಸಂಬಂಧಿಸಿ ಪೋಲೀಸರು ವಶಪಡಿಸಿಕೊಂಡ ವಾಹನಗಳನ್ನು ಈ ಮೈದಾನದಲ್ಲಿ ನಿಲ್ಲಿಸಲಾಗುತ್ತಿದೆ. ಹೀಗೆ ನಿಲ್ಲಿಸಿದ್ದ ವಾಹನಗಳನ್ನು ಕ್ರೈನ್ ಬಳಸಿ ತೆರವುಗೊಳಿಸಲಾಗಿದೆ. ಪೋಲೀಸರ ಅನುಮತಿಯೊಂದಿಗೆ ಉತ್ಸವ ಸಮಿತಿಯ ನೇತೃತ್ವದಲ್ಲಿ ವಾಹನಗಳನ್ನು ಅಲ್ಲಿಂದ ಸ್ಥಳಾಂತರಿಸಲಾಗಿದೆ. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries