ಕಾಸರಗೋಡು: ಹಲವು ಮಾದಕ ದ್ರವ್ಯ ಮಾರಾಟ ಹಾಗೂ ಸಾಗಾಟ ಪ್ರಕರಣಕ್ಕೆ ಸಕಳನಾಡು ಕೀಯೂರು ನಿವಾಸಿ ಶಾಜಹಾನ್ ಪಿ.ಎಂ ಎಂಬಾತನನ್ನು ಮೇಲ್ಪರಂಬ ಠಾಣೆ ಪೊಲೀಸರು ಬಂಧಿಸಿದ್ದು, ಈತನ ವಿರುದ್ಧ ಪಿಟ್ ಎನ್ಡಿಪಿಎಸ್ ಕಾಯ್ದೆಯನ್ವಯ ಕೇಸು ದಾಖಲಿಸಲಾಗಿದೆ.
ಹಲವುಮಾದಕ ದ್ರವ್ಯ ಪ್ರಕರಣಗಳಲ್ಲಿ ಆರೋಪಿಯಾಗಿರುವ ಈತನ ವಿರುದ್ಧ ಕಾಸರಗೋಡು, ವಿದ್ಯಾನಗರ, ಮೇಲ್ಪರಂಬ, ಬೇಕಲ, ಕುಂಬಳೆ ಹಾಗೂ ಮಂಗಳೂರು ಸೆಂಟ್ರಲ್ ಠಾನೆಗಳಲ್ಲಿ ಹತ್ತಕ್ಕೂ ಹೆಚ್ಚು ಮಾದಕ ದ್ರವ್ಯ ಸಾಗಾಟಕ್ಕೆ ಸಂಬಂಧಿಸಿ ಕೇಸುಗಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ವಿ ವಇಜಯಭರತ್ ರೆಡ್ಡಿ ಅವರ ನಿರ್ದೇಶ ಪ್ರಕಾರ ಈತನ ವಿರುದ್ಧ ಎನ್ಡಿಪಿಎಸ್ ಕಾಯ್ದೆ ಹೇರಲಾಗಿದೆ.

