ನವದೆಹಲಿ: ವೆಳ್ಳಾಪ್ಪಳ್ಳಿ ನಟೇಶನ್ ಗೆ ಪದ್ಮಭೂಷಣ ಪ್ರಶಸ್ತಿ ನೀಡುವುದರ ವಿರುದ್ಧದ ದೂರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಗೃಹ ಸಚಿವಾಲಯಕ್ಕೆ ರವಾನಿಸಿದ್ದಾರೆ. ಆರೋಪಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ರಾಷ್ಟ್ರಪತಿಗಳು ಸೂಚಿಸಿದ್ದಾರೆ.
ಕ್ರಿಮಿನಲ್ ಪ್ರಕರಣದಲ್ಲಿ ಆರೋಪಿಯಾದ ವೆಳ್ಳಾಪ್ಪಳ್ಳಿಗೆ ಪದ್ಮ ಪ್ರಶಸ್ತಿಯನ್ನು ನೀಡಿದರೆ ದುರುಪಯೋಗವಾಗಬಹುದೆಂದು ಎತ್ತಿ ತೋರಿಸಿ ಸೇವ್ ಯೂನಿವರ್ಸಿಟಿ ಅಭಿಯಾನ ಸಮಿತಿ ಅಧ್ಯಕ್ಷ ಆರ್.ಎಸ್. ಶಶಿಕುಮಾರ್ ಅವರು ದೂರು ದಾಖಲಿಸಿದ್ದರು. ಪದ್ಮ ಪ್ರಶಸ್ತಿಗಳನ್ನು ಈ ಹಿಂದೆ ಮಾಧ್ಯಮಗಳ ಮೂಲಕ ಸಾರ್ವಜನಿಕವಾಗಿ ದುರುಪಯೋಗಪಡಿಸಿಕೊಂಡ ವ್ಯಕ್ತಿಗೆ ಅದೇ ಗೌರವವನ್ನು ನೀಡುವುದು ಪ್ರಶಸ್ತಿಯ ಪ್ರತಿಷ್ಠೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಇಂತಹ ಉನ್ನತ ಗೌರವವನ್ನು ಯಾರಿಗಾದರೂ ನೀಡುವುದು ಪ್ರಸ್ತುತ ಪ್ರಶಸ್ತಿ ಪುರಸ್ಕøತರಿಗೆ ಅಗೌರವ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. ಹಲವಾರು ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿಯಾಗಿರುವ ವ್ಯಕ್ತಿಗೆ ದೇಶದ ಅತ್ಯುನ್ನತ ಗೌರವವನ್ನು ನೀಡುವುದು ಸೂಕ್ತವಲ್ಲ ಎಂದು ವಿಶ್ವವಿದ್ಯಾಲಯ ಉಳಿಸಿ ಅಭಿಯಾನ ಸಮಿತಿ ಆರೋಪಿಸಿದೆ.

