ಕಾಸರಗೋಡು: ವಿದ್ಯಾನಗರದ ಕಾಸರಗೋಡು ನ್ಯಾಯಾಲಯಕ್ಕಾಗಿ 25 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಸಮುಚ್ಛಯಕ್ಕೆ ಶಿಲಾನ್ಯಾಸ ಫೆ. 21ರಂದು ಜರುಗಲಿದೆ. ಬೆಳಗ್ಗೆ 10ಕ್ಕೆ ನಡೆಯುವ ಸಮಾರಂಭದಲ್ಲಿ ಕೇರಳ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಡ.ಕೌಸರ್ ಇಡಪಗತ್ತ್ ಶಿಲಾನ್ಯಾಸ ನಡೆಸುವರು.
ಕಾಸರಗೋಡು ಪ್ರಿನ್ಸಿಪಲ್ ಜಿಲ್ಲಾ ಸೆಶನ್ಸ್ ನ್ಯಾಯಾಲಯದ ನ್ಯಾಯಾಧೀಶ ಸಾನು ಎಸ್. ಪಣಿಕ್ಕರ್ ಅಧ್ಯಕ್ಷತೆ ವಹಿಸುವರು. ಹೈಕೋರ್ಟು ನ್ಯಾಯಮೂರ್ತಿ ಎ.ಎ ಸಿಯಾದ್ ರಹಮಾನ್ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಸಂಸದ ರಾಜ್ಮೋಹನ್ ಉಣ್ಣಿತ್ತಾನ್, ಶಾಸಕ ಎನ್.ಎ ನೆಲ್ಲಿಕುನ್ನು ಮೊದಲಾದವರು ಪಾಲ್ಗೊಳ್ಳುವರು. ಬಹುಮಹಡಿ ಕಟ್ಟಡ ಇದಾಗಿದ್ದು, ಒಟ್ಟು57167ಚದರ ಅಡಿ ವಿಸ್ತೀರ್ಣದಲ್ಲಿ ಅತ್ಯಾಧುನಿಕ ಸೌಕರ್ಯಗಳೊಂದಿಗೆ ನಿರ್ಮಾಣಗೊಳ್ಳಲಿದೆ. ಒಂದೂವರೆ ವರ್ಷದೊಳಗೆ ಕಾಮಗಾರಿಪೂರ್ತಿಗೊಳ್ಳಲಿದೆ.

