HEALTH TIPS

ಶಬರಿಮಲೆ ಚಿನ್ನ ಕಳವು ಪ್ರಕರಣ: ಪ್ರಮುಖ ಆರೋಪಿ ಪೋಟಿಗೆ ಜಾಮೀನು

ಕೊಲ್ಲಂ:ಶಬರಿಮಲೆ ದೇಗುಲದ ಚಿನ್ನ ಕಳವಿಗೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿ ಉಣ್ಣಿಕೃಷ್ಣನ್‌ ಪೋಟಿ ಅವರಿಗೆ ಕೇರಳದ ನ್ಯಾಯಾಲಯವೊಂದು ಬುಧವಾರ ಜಾಮೀನು ನೀಡಿದೆ.

ಚಿನ್ನ ಕಳವಿನ ಎರಡನೇ ಪ್ರಕರಣದಲ್ಲಿ ಕೇರಳದ ವಿಜಿಲೆನ್ಸ್ ನ್ಯಾಯಾಲಯವು ಕಾನೂನಿನ್ವಯ ಜಾಮೀನು ಮಂಜೂರು ಮಾಡಿದೆ.

ಇದೀಗ ಎರಡೂ ಪ್ರಕರಣಗಳಲ್ಲಿ ಜಾಮೀನು ದೊರೆತಿರುವುದರಿಂದ ಜೈಲಿನಿಂದ ಪೋಟಿ ಬಿಡುಗಡೆಯ ಹಾದಿ ಸುಗಮವಾಗಿದೆ.

ಶ್ರೀಕೋವಿಲ್ ಬಾಗಿಲು ಚೌಕಟ್ಟಿನ ಚಿನ್ನ ಕಳವು ಪ್ರಕರಣದಲ್ಲಿ ಜನವರಿ 21ರಂದು ಪೋಟಿ ಅವರಿಗೆ ಜಾಮೀನು ದೊರೆತಿತ್ತು.

ಪ್ರಕರಣ ದಾಖಲಾಗಿ 90 ದಿನ ಕಳೆದರೂ ಕಾನೂನಿನ್ವಯ ವಿಶೇಷ ತನಿಖಾ ತಂಡ (ಎಸ್‌ಐಟಿ) ದೋಷಾರೋಪ ಪಟ್ಟಿ ಸಲ್ಲಿಸದ ಕಾರಣ ಜಾಮೀನು ನೀಡಬೇಕು ಎಂದು ಪೋಟಿ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

ಎಸ್‌ಐಟಿ ಪರ ಪಬ್ಲಿಕ್ ಪ್ರಾಸಿಕ್ಯೂಟರ್ ಸಿಜು ರಾಜನ್, ಪೋಟಿಗೆ ಜಾಮೀನು ನೀಡಬಾರದು ಎಂದು ವಾದ ಮಂಡಿಸಿದ್ದರು.

ಎರಡು ಪ್ರಕರಣಕ್ಕೆ ಸಂಬಂಧಿಸಿ ಎಸ್‌ಐಟಿಯು ಈವರೆಗೆ 12 ಮಂದಿಯನ್ನು ಬಂಧಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries