ಕಾಸರಗೋಡು: ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಸಂಪೂರ್ಣ ಹಾನಿಗೊಂಡಿರುವ ಅಡ್ಕತ್ತಬೈಲು ಕ್ಷೇತ್ರ ವ್ಯಾಪ್ತಿಯ ಬೀರಂತಬೈಲು ಪುಷ್ಪಾ ಗಣಪತಿ ಆಚಾರ್ಯ ಅವರ ಕುಟುಂಬಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಪೂಜ್ಯ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ಮಂಜೂರು ಮಾಡಿರುವ ಧನಸಹಾಯದ ಮಂಜೂರಾತಿ ಪತ್ರವನ್ನು ಸಂತ್ರಸ್ತ ಮನೆಯವರಿಗೆ ಹಸ್ತಾಂತರಿಸಲಾಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಯೋಜನಾಧಿಕಾರಿ ದಿನೇಶ್, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಕಾಸರಗೋಡು ತಾಲೂಕು ಅಧ್ಯಕ್ಷರಾದ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ, ನಗರಸಭಾ 5ನೇ ವಾರ್ಡು ಕೌನ್ಸಿಲರ್ ಹರೀಶ್ ಕೆ.ಆರ್. ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕ ಗೋಪಾಲಕೃಷ್ಣ, ಸೇವಾಪ್ರತಿನಿಧಿ ಶೋಭಾ ಹಾಗೂ ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು.


