ಕಾಸರಗೋಡು: ನಗರದ ಅಮೈ ಶ್ರೀ ಕೃಷ್ಣ ಭಜನಾ ಮಂದಿರದ ರಜತ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಮಂದಿರದಲ್ಲಿ ಬಿಡುಗಡೆಗೊಳಿಸಲಾಯಿತು, ಸಮಿತಿ ಅಧ್ಯಕ್ಷ ಕೆ ಸದಾಶಿವ ಮಲ್ಯ ಆಮಂತ್ರಣಪತ್ರಿಕೆ ಬಿಡುಗಡೆಗೊಳಿಸಿದರು. ಸಮಿತಿ ಪ್ರಧಾನ ಕಾರ್ಯದರ್ಶಿ ಗುಣಪಾಲ ಅಮೈ, ಕೋಶಾಧಿಕಾರಿ ವೇಣುಗೋಪಾಲ್, ವೈದಿಕ ಸಮಿತಿಯ ಅಧ್ಯಕ್ಷ ಡಾ. ಕೆ.ಎನ್. ವೆಂಕಟರಮಣ ಹೊಳ್ಳ, ಭಜನಾ ಮಂದಿರದ ಗೌರವಾಧ್ಯಕ್ಷ ಗಂಗಾಧರ ಅಮೈ ಮೊದಲಾದವರು ಉಪಸ್ಥಿತರಿದ್ದರು.
ಶ್ರೀಕೃಷ್ಣ ಭಜನಾಮಂದಿರದ ರಜತ ಮಹೋತ್ಸವ ಸಮಾರಂಭ ಏಪ್ರಿಲ್ 23ರಿಂದ 25ರ ವರೆಗೆ ವಿವಿಧ ಧಾರ್ಮಿಕ, ವೈದಿಕ, ಸಾಂಸ್ಕøತಿಕ, ಕಾರ್ಯಕ್ರಮಗಳೊಂದಿಗೆ ಆಚರಿಸಲು ತೀರ್ಮಾನಿಸಲಾಯಿತು, ಪ್ರಧಾನ ಸಲಹೆಗಾರ ದೇವದಾಸ್ ನುಳ್ಳಿಪಾಡಿ ಸ್ವಾಗತಿಸಿದರು. ಸಾಂಸ್ಕೃತಿಕ ಸಮಿತಿಯ ಸಂಚಾಲಕ ರಾಜೇಶ್ ಅಮೈ ವಂದಿಸಿದರು.


