ತಿರುವನಂತಪುರಂ: ಮುಂದಿನ ದಿನಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಪ್ರಕಟಿಸಿದೆ.
ಬಂಗಾಳಕೊಲ್ಲಿ ಮತ್ತು ಹಿಂದೂ ಮಹಾಸಾಗರದಲ್ಲಿ ರೂಪುಗೊಂಡಿರುವ ಕಡಿಮೆ ಒತ್ತಡದಿಂದಾಗಿ ಮಳೆಯಾಗಿದೆ. ಜಾಗೃತಾ ಕ್ರಮದ ಭಾಗವಾಗಿ, ಕೇಂದ್ರ ಹವಾಮಾನ ಇಲಾಖೆ ವಿವಿಧ ಜಿಲ್ಲೆಗಳಲ್ಲಿ ಹಳದಿ ಎಚ್ಚರಿಕೆ ನೀಡಿದೆ.
ಫೆಬ್ರವರಿ 21 (ಶನಿವಾರ) ರಂದು ತಿರುವನಂತಪುರಂ, ಕೊಲ್ಲಂ, ಪಟ್ಟಣಂತಿಟ್ಟ, ಕೊಟ್ಟಾಯಂ, ಇಡುಕ್ಕಿ ಜಿಲ್ಲೆಗಳಲ್ಲಿ ಮತ್ತು ಫೆಬ್ರವರಿ 22 (ಭಾನುವಾರ) ರಂದು ಪಟ್ಟಣಂತಿಟ್ಟ, ಕೊಟ್ಟಾಯಂ, ಇಡುಕ್ಕಿ ಜಿಲ್ಲೆಗಳಲ್ಲಿ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ.
'ಭಾರೀ ಮಳೆ' ಎಂದರೆ 24 ಗಂಟೆಗಳಲ್ಲಿ 64.5 ಮಿ.ಮೀ ನಿಂದ 115.5 ಮಿ.ಮೀ. ವರೆಗಿನ ಮಳೆ ಎಂದು ವ್ಯಾಖ್ಯಾನಿಸಲಾಗಿದೆ. ದಕ್ಷಿಣ ಶ್ರೀಲಂಕಾ ಕರಾವಳಿಯಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯಿಂದ ಈ ಮಳೆ ಉಂಟಾಗುತ್ತದೆ.
ಇದು ಕ್ರಮೇಣ ಉತ್ತರಕ್ಕೆ ಹರಡುತ್ತದೆ ಮತ್ತು ಫೆಬ್ರವರಿ 21 ಮತ್ತು 22 ರಂದು ಇಡೀ ರಾಜ್ಯವು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನಶಾಸ್ತ್ರಜ್ಞರು ತಿಳಿಸಿದ್ದಾರೆ.
ಮಳೆಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಜಾಗರೂಕರಾಗಿರಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚಿಸಿದೆ.
ಕೊಯ್ಲಿಗೆ ಮಾಗಿರುವ ಭತ್ತ ಸೇರಿದಂತೆ ಕೃಷಿ ಉತ್ಪನ್ನಗಳನ್ನು ಸುರಕ್ಷಿತ ಸ್ಥಳಕ್ಕೆ ಸಾಗಿಸಲು ರೈತರಿಗೆ ಸೂಚಿಸಲಾಗಿದೆ. ಮೀನುಗಾರರು ಹವಾಮಾನ ಸಲಹೆಗಳಿಗೆ ಗಮನ ಕೊಡಬೇಕು, ಆದರೂ ಪ್ರಸ್ತುತ ಸಮುದ್ರಕ್ಕೆ ಹೋಗುವುದಕ್ಕೆ ಯಾವುದೇ ನಿಬರ್ಂಧವಿಲ್ಲ.



