ಸಮರಸ ಚಿತ್ರಸುದ್ದಿ: ಬದಿಯಡ್ಕ: ಕ್ಯಾಂಪ್ಕೋ ಸಂಸ್ಥೆಯ ಸಾಂತ್ವನ ಯೋಜನೆಯಡಿ ಕ್ಯಾಂಪ್ಕೋ ಬದಿಯಡ್ಕ ಶಾಖೆಯ ಸಕ್ರಿಯ ಸದಸ್ಯ ಗೋಪಾಲಕೃಷ್ಣ ಭಟ್ಟರು ಆಕಸ್ಮಿಕವಾಗಿ ನಿಧನರಾಗಿರುವ ಹಿನ್ನೆಲೆಯಲ್ಲಿ, ಅವರ ಧರ್ಮಪತ್ನಿ ವೈಜಯಂತಿ ಅವರಿಗೆ ರೂ. 50,000 ಸಹಾಯ ಧನದ ಚೆಕ್ ಅನ್ನು ಬದಿಯಡ್ಕ ಶಾಖೆಯಲ್ಲಿ ಉಪಾಧ್ಯಕ್ಷ ಪದ್ಮರಾಜ ಪಟ್ಟಾಜೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಬದಿಯಡ್ಕ ಪ್ರಾಂತೀಯ ವ್ಯವಸ್ಥಾಪಕ ಚಂದ್ರ ಎಂ., ಬದಿಯಡ್ಕ ಶಾಖೆಯ ವ್ಯವಸ್ಥಾಪಕರು, ಸಿಬ್ಬಂದಿಗಳು ಹಾಗೂ ಸಂಸ್ಥೆಯ ಸದಸ್ಯರು ಉಪಸ್ಥಿತರಿದ್ದರು.

.jpg)
