HEALTH TIPS

ಪೆರ್ಲ ಇಡಿಯಡ್ಕ ಕ್ಷೇತ್ರ ವಾರ್ಷಿಕ ಜಾತ್ರಾಮಹೋತ್ಸವ ಆರಂಭ-ಇಂದು ಕಜಂಬು ಉತ್ಸವ, ಶ್ರೀ ಉಳ್ಳಾಲ್ತಿ ನೇಮೋತ್ಸವ

ಪೆರ್ಲ: ಇಡಿಯಡ್ಕ ಶ್ರೀ ದುರ್ಗಾಪರಮೇಶ್ವರೀ(ಉಳ್ಳಾಲ್ತೀ)ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಭಾನುವಾರ ದ್ವಜಾರೋಹಣ ನಡೆಯಿತು. ಬ್ರಹ್ಮಶ್ರೀ ವಾಸುದೇವ ತಂತ್ರಿ ಕುಂಟಾರು ಹಾಗೂ ಬ್ರಹ್ಮಶ್ರೀ ರವೀಶ ತಂತ್ರಿ ಕುಂಟಾರು ಅವರ ನೇತೃತ್ವದಲ್ಲಿ ಜಾತ್ರಾ ಮಹೋತ್ಸವ ನಡೆಯುತ್ತಿದೆ.  

ಬೆಳಗ್ಗೆ ಗಣಪತಿ ಹವನ, ಧ್ವಜಾರೋಹಣ, ಪೆರ್ಲ ಶ್ರೀ ಸತ್ಯನಾರಾಯಣ ಮಂದಿರ ವಠಾರದಿಂದ ದೇವಸ್ಥಾನಕ್ಕೆ ಹಸಿರುವಾಣಿ ಸಮರ್ಪಣೆಯ ಭವ್ಯ ಮೆರವಣಿಗೆ ನಡೆಯಿತು. ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ಕರ್ನಾಟಕ ಶಾಸ್ತ್ರೀಯ ಸಂಗೀತ ಮತ್ತು ವಯಲಿನ್ ವಾದನ,ವಿಠಲ ನಾಯಕ್ ಮತ್ತು ಬಳಗದವರಿಂದ ಗೀತಾ ಸಾಹಿತ್ಯ ಸಂಭ್ರಮ,  ವಿಜಯಕುಮಾರ್ ಕೊಡಿಯಾಲಬೈಲ್ ನಿರ್ದೇಶನದಲ್ಲಿ 'ಶಿವದೂತೆ ಗುಳಿಗೆ' ವಿಭಿನ್ನಶೈಲಿಯ ನಾಟಕ ಪ್ರದರ್ಶನಗೊಮಡಿತು.

3ರಂದು ಬೆಳಗ್ಗೆ 6ಕ್ಕೆ ಚಂಡಿಕಾ ಹವನ ಆರಂಭ, 11ಕ್ಕೆ ಪೂರ್ಣಾಹುತಿ, ತುಲಾಭಾರ ಸೇವೆ, ಸಂಜೆ 6ಕ್ಕೆ ಕಜಂಬು ಉತ್ಸವ, 8ಕ್ಕೆ ಶ್ರೀ ಉಳ್ಳಾಲ್ತೀ ಭಂಡಾರ ಹೊರಡುವುದು, ಶ್ರೀ ಉಳ್ಳಾಲ್ತೀ ಅಶ್ವರಥ ಸವಾರಿ, ಶ್ರೀಉಳ್ಳಾಲ್ತೀ ನೇಮ ನಡೆಯುವುದು.

ಫೆ. 4ರಂದು ಬೆಳಗ್ಗೆ 10ಕ್ಕೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಸಂಜೆ 6ಕ್ಕೆ ತಿರುವಾದಿರ, 7ಕ್ಕೆ ನಾಟ್ಯಗುರು ಬಾಲಕೃಷ್ಣ ಮಂಜೇಶ್ವರ ಶಿಷ್ಯವೃಂದದಿಂದ 'ಆಕರ್ಷಣ' ಭರತ ನಾಟ್ಯ, ರಾತ್ರಿ 8ಕ್ಕೆ ಶ್ರೀ ವಿಷ್ಣುಮೂರ್ತಿ ದೈವದ ಭಂಡಾರ ಹೊರಡುವುದು, 8.30ಕ್ಕೆತೊಡಙಳ್, ಶ್ರೀ ವಿಷ್ಣುಮೂರ್ತಿ ದೈವದ ಕುಳಿಚ್ಚಾಟ ನಡೆಯುವುದ. 5ರಂದುಬೆಳಗ್ಗೆ 9ಕ್ಕೆ ಶ್ರೀ ವಿಷ್ಣುಮೂರ್ತಿ ದೈವದ ಕೋಲ, ಮಧ್ಯಾಹ್ನ 12.30ಕ್ಕೆ ಧ್ವಜಾವರೋಹಣ ನಡೆಯುವುದು. 


 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries