ಬದಿಯಡ್ಕ: ಮಾರ್ಪನಡ್ಕದಲ್ಲಿರುವ ಕೇರಳ ಗ್ರಾಮೀಣ ಬ್ಯಾಂಕ್ ನೌಕರ ಹಾಗೂ ಕುಂಟಿಕಾನ ಶ್ರೀ ಭಾರತಾಂಬಾ ಸೇವಾಟ್ರಸ್ಟ್ ಸಕ್ರಿಯ ಸದಸ್ಯ ಸಾಮಾಜಿಕ ಕಾರ್ಯಕರ್ತ ನೀರ್ಚಾಲು ದೇವರಮೆಟ್ಟು ನಿವಾಸಿ ನಳಿನಾಕ್ಷನ್ ಅವರು ಅಪಘಾತದಲ್ಲಿ ಗಾಯಗೊಂಡು ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾರೆ. ದುಬಾರಿ ವೆಚ್ಚವನ್ನು ಭರಿಸುವ ನಿಟ್ಟಿನಲ್ಲಿ ಕುಂಟಿಕಾನ ಶ್ರೀ ಭಾರತಾಂಬಾ ಸೇವಾಟ್ರಸ್ಟ್ ವತಿಯಿಂದ ಚಿಕಿತ್ಸೆಗೆ ನೆರವನ್ನು ಯಾಚಿಸಲಾಗಿತ್ತು. ಅಗಲ್ಪಾಡಿ ಜಯನಗರ ಶ್ರೀ ಗೋಪಾಲಕೃಷ್ಣ ಭಜನಾ ಮಂದಿರದ ನೇತೃತ್ವದಲ್ಲಿ ಸಂಗ್ರಹಿಸಿದ 60,100:00 ರೂ.ಗಳನ್ನು ಬದಿಯಡ್ಕ ಗ್ರಾಮಪಂಚಾಯಿತಿನ ನೀರ್ಚಾಲು ವಾರ್ಡು ಸದಸ್ಯ ಶ್ಯಾಮಪ್ರಸಾದ ಸರಳಿ ಹಾಗೂ ಶ್ರೀ ಭಾರತಾಂಬಾ ಸೇವಾ ಟ್ರಸ್ಟ್ ಉಪಾಧ್ಯಕ್ಷ ಈಶ್ವರಚಂದ್ರ ಪ್ರಸಾದ ಕುಳಮರ್ವ ಇವರಿಗೆ ಶ್ರೀ ಗೋಪಾಲಕೃಷ್ಣ ಭಜನ ಮಂದಿರದಲ್ಲಿ ನಳಿನಾಕ್ಷನ್ ಶೀಘ್ರ ಗುಣಮುಖರಾಗಲು ವಿಶೇಷ ಪ್ರಾರ್ಥನೆಗೈದು ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ನಡೆದ ಸರಳ ಸಮಾರಂಭದ ಅಧ್ಯಕ್ಷತೆಯನ್ನು ಮಂದಿರದ ಅಧ್ಯಕ್ಷ ಬಾಬು ಮಾಸ್ತರ್ ಆಗಲ್ಪಾಡಿ ವಹಿಸಿದ್ದರು. ಬಾಬು ಮಣಿಯಾಣಿ ಜಯನಗರ, ಜನಾರ್ದನ ಮಣಿಯಾಣಿ ಬೆದ್ರುಕೂಡ್ಲು, ಸುಧಾಮ ಪದ್ಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಂದಿರದ ಪದಾಧಿಕಾರಿಗಳಾದ ಅಚ್ಯುತ ಮಾಸ್ತರ್, ಅಚ್ಯುತ ಪದ್ಮಾರ್, ಶ್ರೀಧರ್ ಪದ್ಮಾರ್, ವಿ.ದಾಮೋದರ ಅಗಲ್ಪಾಡಿ, ರೂಪರಾಜ್ ಪದ್ಮಾರ್, ರವೀಂದ್ರ ಜಯನಗರ, ಉದಯ ಕುಮಾರ್ ಕಲ್ಲಕಟ್ಟ, ಪ್ರಸೀದ ಮಾರ್ಪನಡ್ಕ, ರಾಧಾಕೃಷ್ಣ, ಕೃಷ್ಣ ಪ್ರಸಾದ್ ಬೆದ್ರುಕುಡ್ಲು ಪಾಲ್ಗೊಂಡಿದ್ದರು. ಪ್ರಧಾನ ಕಾರ್ಯದರ್ಶಿ ರಾಜೇಶ್ ಮಾಸ್ತರ್ ಅಗಲ್ಪಾಡಿ ಸ್ವಾಗತಿಸಿ, ಕಾರ್ಯದರ್ಶಿ ರಮೇಶ್ ಕೃಷ್ಣ ಪದ್ಮಾರ್ ವಂದಿಸಿದರು.

.jpg)
