HEALTH TIPS

ತಾರಿಕ್ ರೆಹಮಾನ್: ಬಾಂಗ್ಲಾ ಪ್ರಧಾನಿಯಾಗುತ್ತಿದ್ದಂತೆ ಭಾರತದಿಂದ ಆಹ್ವಾನ!

ನವದೆಹಲಿ: ಕಳೆದ 18 ತಿಂಗಳಿನಿಂದ ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಸಂಬಂಧ ಹದಗೆಟ್ಟಿದೆ. ಉಭಯ ದೇಶಗಳ ನಡುವೆ ಹೊಸ ಸುಧಾರಣೆಗೆ ತರಲು ಭಾರತ ಉತ್ಸುಕವಾಗಿದೆ. ಈ ಹಿನ್ನೆಲೆ, ಬಾಂಗ್ಲಾದೇಶ ರಾಷ್ಟ್ರೀಯ ಪಕ್ಷದ ಮುಖ್ಯಸ್ಥ ತಾರಿಕ್ ರೆಹಮಾನ್ ಅವರು ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ, ಅವರನ್ನು ಭಾರತಕ್ಕೆ ಆಹ್ವಾನಿಸುವ ಸಾಧ್ಯತೆ ಇದೆ.

ತಾರಿಕ್, ನಾಳೆ (ಮಂಗಳವಾರ) ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಭಾರತದ ಪ್ರತಿನಿಧಿಯಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಭಾಗವಹಿಸಲಿದ್ದಾರೆ. ಬಿರ್ಲಾ ಅವರ ಜೊತೆ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಕೂಡ ತೆರಳಲಿದ್ದಾರೆ.

ಸಮಾರಂಭದ ಬಳಿಕ ಪ್ರಧಾನಿ ನರೇಂದ್ರ ಮೋದಿಯವರು ಬಾಂಗ್ಲಾ ಪ್ರಧಾನಿ ತಾರಿಕ್ ರೆಹಮಾನ್ ಅವರನ್ನು ಭಾರತಕ್ಕೆ ಆಹ್ವಾನಿಸುವ ಸಾಧ್ಯತೆ ಇದೆ.

ಇತ್ತೀಚೆಗೆ ಮುಕ್ತಾಯಗೊಂಡ ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ತಾರಿಕ್ ರೆಹಮಾನ್ ಅವರ ಬಿಎನ್‌ಪಿಯು ಜಮಾತೆ ಇಸ್ಲಾಮಿ ಪಾರ್ಟಿಯನ್ನು ಸೋಲಿಸಿ ಅಧಿಕಾರಕ್ಕೆ ಏರಿದೆ.

ಈ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಭಾರತದ ಪ್ರತಿನಿಧಿಯಾಗಿ ಲೋಕಸಭಾ ಸ್ಪೀಕರ್ ಭಾಗವಹಿಸುವುದರಿಂದ ಬಾಂಗ್ಲಾದೇಶ ಹಾಗೂ ಭಾರತ ನಡುವಿನ ಸ್ನೇಹವನ್ನು ವೃದ್ಧಿಯಾಗಲಿದೆ ಮತ್ತು ಉಭಯ ದೇಶಗಳ ನಡುವಿನ ಪ್ರಜಾಪ್ರಭುತ್ವ ಮೌಲ್ಯವನ್ನು ಮತ್ತಷ್ಟು ಉತ್ತಮಗೊಳಿಸಲು ಸಾಕಾರವಾಗಲಿದೆ ಎಂದು ಭಾರತ ವಿದೇಶಾಂಗ ಸಚಿವಾಲಯ ತಿಳಿಸಿದೆ.

ಮಂಗಳವಾರ ಢಾಕಾದಲ್ಲಿ ನಡೆಯಲಿರುವ ಪ್ರಮಾಣವಚನ ಸಮಾರಂಭಕ್ಕೆ ಮೋದಿ ಅವರನ್ನು ಬಿಎನ್‌ಪಿ ಆಹ್ವಾನಿಸಿತ್ತು. ಆದರೆ, ಅದೇ ದಿನ ಮುಂಬೈನಲ್ಲಿ ನಡೆಯಲಿರುವ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರ ಜೊತೆಗಿನ ಸಭೆಗೆ ಪ್ರಧಾನಿ ಮೋದಿ ಆತಿಥ್ಯ ವಹಿಸಬೇಕಾಗಿರುವುದರಿಂದ ಬಾಂಗ್ಲಾದಲ್ಲಿ ನಡೆಯಲಿರುವ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಭಾರತ ಸರ್ಕಾರವು ಬಿಎನ್‌ಪಿಗೆ ತಿಳಿಸಿದೆ.

54 ವರ್ಷಗಳ ಬಾಂಗ್ಲಾದೇಶದ ಇತಿಹಾಸದಲ್ಲಿ, ಕಳೆದ 4 ಸಂಸತ್ ಚುನಾವಣೆಗಳಲ್ಲಿ ಗೆಲುವು ಸಾಧಿಸಿದ್ದ ಅವಾಮಿ ಲೀಗ್ ಇಲ್ಲದೆ ನಡೆದ ಚುನಾವಣೆಯಲ್ಲಿ ತಾರಿಕ್ ರೆಹಮಾನ್ ಅವರ ಬಿಎನ್‌ಪಿ ಭರ್ಜರಿ ಬಹುಮತ ದಾಖಲಿಸಿದೆ. ಈ ಗೆಲುವಿನ ಬಳಿಕ ಮೋದಿಯವರು ರೆಹಮಾನ್‌ ಅವರಿಗೆ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.

ಬಾಂಗ್ಲಾದೇಶದಲ್ಲಿ ರೆಹಮಾನ್ ಅವರ ತಾಯಿ ಖಲೀದಾ ಜಿಯಾ ಪ್ರಧಾನಿಯಾಗಿದ್ದಾಗ, ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಸಂಬಂಧ ಹದಗೆಟ್ಟಿತ್ತು.

ಭಾರತದ ಈಶಾನ್ಯ ರಾಜ್ಯಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಉಗ್ರಗಾಮಿ ಸಂಘಟನೆಗಳಿಗೆ ಬಾಂಗ್ಲಾದೇಶದಲ್ಲಿ ಶಿಬಿರಗಳನ್ನು ಸ್ಥಾಪಿಸಲು ಖಲೀದಾ ಅವರ ಸರ್ಕಾರ ಅವಕಾಶ ನೀಡಿತ್ತು. ಭೂಕುಸಿತದ ಆತಂಕವಿರುವ ಭಾರತದ ಈಶಾನ್ಯ ರಾಜ್ಯಗಳು ಮತ್ತು ಅದರ ಪ್ರಮುಖ ಭೂಭಾಗಗಳಿಗೆ ಸಂಪರ್ಕ ಕಲ್ಪಿಸಲು ಬಾಂಗ್ಲಾದೇಶದಲ್ಲಿ ಅವಕಾಶ ನೀಡುವಂತೆ ಅಂದಿನ ಭಾರತ ಸರ್ಕಾರ ಮಾಡಿದ್ದ ಮನವಿಯನ್ನು ಖಲೀದಾ ತಿರಸ್ಕರಿಸಿದ್ದರು.

ಮಾತ್ರವಲ್ಲ, ಗಡಿ ಭಾಗದಲ್ಲಿ ಭಾರತ ಹಾಗೂ ಬಾಂಗ್ಲಾದೇಶಗಳ ಸೇನಾಪಡೆಗಳ ನಡುವೆ ಆಗಾಗ ಘರ್ಷಣೆಗಳು ಉಂಟಾಗುತ್ತಿತ್ತು. ಆದರೆ, 2009ರ‌ಲ್ಲಿ ಬಾಂಗ್ಲಾದೇಶದಲ್ಲಿ ಶೇಖ್ ಹಸೀನಾ ಅವರ ಅವಾಮಿ ಲೀಗ್ ಅಧಿಕಾರಕ್ಕೆ ಬಂದ ಬಳಿಕ ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳು ಉತ್ತಮಗೊಂಡಿದ್ದವು.

2024ರಲ್ಲಿ ಬಾಂಗ್ಲಾದ ಯುವಕರ ದಂಗೆಯ ಬಳಿಕ ಪ್ರಧಾನಿ ಶೇಖ್ ಹಸೀನಾ ಅವರು ಬಾಂಗ್ಲಾದಿಂದ ಓಡಿಬಂದಾಗ ಭಾರತ ಅವರಿಗೆ ಆಶ್ರಯ ನೀಡಿತ್ತು. ಇದಕ್ಕೆ ಬಿಎನ್‌ಪಿಯು ಬಾಂಗ್ಲಾದೇಶವನ್ನು ಅಸ್ಥಿರಗೊಳಿಸಲು ಪಿತೂರಿ ನಡೆಸಲು ಭಾರತ ಅವಕಾಶ ನೀಡುತ್ತಿದೆ ಎಂದು ಆರೋಪಿಸಿತ್ತು.

ಬಾಂಗ್ಲಾದೇಶದಲ್ಲಿ 2024ರಲ್ಲಿ ವಿದ್ಯಾರ್ಥಿ ದಂಗೆ ತೀವ್ರಗೊಂಡ ಕಾರಣ, ಶೇಖ್‌ ಹಸೀನಾ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ, ದೇಶದಿಂದ ಪಲಾಯನ ಮಾಡಿದ್ದರು.

ಭಾರತವು ಹಸೀನಾ ಅವರಿಗೆ ಆಶ್ರಯ ನೀಡುವ ಮೂಲಕ ಬಾಂಗ್ಲಾದೇಶವನ್ನು ಅಸ್ಥಿರಗೊಳಿಸಲು ಪಿತೂರಿ ನಡೆಸಲು ಅವಕಾಶ ಮಾಡಿಕೊಡುತ್ತಿದೆ ಎಂದು ಬಿಎನ್‌ಪಿ ಆರೋಪಿಸಿತ್ತು.

ಕಳೆದ 18 ತಿಂಗಳುಗಳಿಂದ ಬಾಂಗ್ಲಾದೇಶದಲ್ಲಿ ಹಿಂದೂಗಳು ಸೇರಿದಂತೆ ಇತರೆ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯವನ್ನು ಭಾರತ ಖಂಡಿಸಿತ್ತು. ಆದರೆ, ಹಸೀನಾ ನಿರ್ಗಮನದ ಬಳಿಕ ಅಧಿಕಾರ ವಹಿಸಿಕೊಂಡ ಮುಹಮ್ಮದ್ ಯೂನಸ್ ಅವರ ಮಧ್ಯಂತರ ಸರ್ಕಾರ ಹಾಗೂ ಭಾರತದ ನಡುವೆ ಬಿಕ್ಕಟ್ಟುಗಳು ಹೆಚ್ಚಾಗಿದ್ದವು.

2025ರ ನವೆಂಬರ್‌ನಲ್ಲಿ ಖಲೀದಾ ಜಿಯಾ ಅವರ ಆರೋಗ್ಯ ಹದಗೆಟ್ಟಿದ್ದರಿಂದ ಢಾಕಾದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆ ಸಂದರ್ಭದಲ್ಲಿ ಭಾರತ ಸರ್ಕಾರ ಅವರ ವೈದ್ಯಕೀಯ ಚೇತರಿಕೆಗೆ ಬೆಂಬಲ ನೀಡಿತ್ತು. ಮಾತ್ರವಲ್ಲ, ಅವರ ನಿಧನದ ಬಳಿಕ ಭಾರತ ವಿದೇಶಾಂಗ ಸಚಿವ ಎಸ್‌. ಜೈಶಂಕ‌ರ್ ಅವರು ಢಾಕಾಗೆ ತೆರಳಿ, ಜಿಯಾ ಅವರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು. ಹಾಗೂ ಮೋದಿ ಅವರು ನೀಡಿದ್ದ ಸಂತಾಪ ಪತ್ರವನ್ನು ರೆಹಮಾನ್ ಅವರಿಗೆ ಹಸ್ತಾಂತರಿಸಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries