"ನಾವು ಈ ಬಗ್ಗೆ ಆಳವಾದ ತನಿಖೆ ನಡೆಸಲು ಬಯಸುತ್ತೇವೆ. ನ್ಯಾಯಾಂಗದ ಮುಖ್ಯಸ್ಥರಾಗಿ, ಹೊಣೆಗಾರಿಕೆಯನ್ನು ಖಚಿತಪಡಿಸಿಕೊಳ್ಳುವುದು ನನ್ನ ಕರ್ತವ್ಯ, ಇದಕ್ಕೆ ಕಾರಣರಾದವರ ತಲೆದಂಡವಾಗಬೇಕು. ನಾನು ಈ ಕುರಿತ ವಿಚಾರಣೆಯನ್ನು ಮುಕ್ತಾಯಗೊಳಿಸುವುದಿಲ್ಲ. ಇದರ ಹಿಂದೆ ಯಾರು ಇದ್ದಾರೆ ಎಂಬುದನ್ನು ತಿಳಿದುಕೊಳ್ಳಲು ನಾವು ಬಯಸುತ್ತೇವೆ ಎಂದು ಸಿಜೆಐ ಸೂರ್ಯಕಾಂತ್ ಹೇಳಿದ್ದಾರೆ.
NCERT ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿನ ʼನ್ಯಾಯಾಂಗ ಭ್ರಷ್ಟಾಚಾರದʼ ಕುರಿತಾದ ಅಧ್ಯಾಯದ ಕುರಿತು ಬುಧವಾರ ಮುಖ್ಯ ನ್ಯಾಯಮೂರ್ತಿ ಗಂಭೀರವಾದ ಆಕ್ಷೇಪವನ್ನು ವ್ಯಕ್ತಪಡಿಸಿದ್ದರು. ನ್ಯಾಯಾಂಗದ ಸಮಗ್ರತೆಯನ್ನು ಕೆಣಕುವ ಅಥವಾ ದುರ್ಬಲಗೊಳಿಸುವ ಯಾವುದೇ ಪ್ರಯತ್ನವನ್ನು ಸುಪ್ರೀಂ ಕೋರ್ಟ್ ಅನುಮತಿಸುವುದಿಲ್ಲ ಎಂದು ಎಚ್ಚರಿಸಿದ್ದರು.

