HEALTH TIPS

2027ರ ಚುನಾವಣೆ ಹಿನ್ನೆಲೆಯಲ್ಲಿ ವಿವಾದಾತ್ಮಕ ಹೇಳಿಕೆ ನೀಡದಂತೆ ಉತ್ತರಪ್ರದೇಶದ BJP ನಾಯಕರಿಗೆ RSS ಸಲಹೆ!

ಲಖನೌ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವುದರಿಂದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದ ಸಚಿವರು ಮತ್ತು ಪಕ್ಷದ ಶಾಸಕರು ತಮ್ಮ ಕಾರ್ಯಶೈಲಿಯನ್ನು ಸುಧಾರಿಸಿಕೊಳ್ಳುವಂತೆ ಮತ್ತು ವಿವಾದಾತ್ಮಕ ಹೇಳಿಕೆಗಳನ್ನು ನೀಡದಂತೆ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಸಲಹೆ ನೀಡಿದೆ.

ಉನ್ನತ ಸ್ಥಾನದಲ್ಲಿರುವ ಮೂಲಗಳ ಪ್ರಕಾರ, ಇಂದು ಮುಖ್ಯಮಂತ್ರಿ ಯೋಗಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಈ ಸಲಹೆಯನ್ನು ನೀಡಲಾಗಿದೆ.

2027ರ ವಿಧಾನಸಭಾ ಚುನಾವಣೆಗೆ ಮುನ್ನ ಪಕ್ಷದ ಕಾರ್ಯಕರ್ತರಲ್ಲಿ ಉಂಟಾಗಿರುವ ಅಸಮಾಧಾನವನ್ನು ಪರಿಹರಿಸುವತ್ತ ಆರ್‌ಎಸ್‌ಎಸ್ ಗಮನ ಹರಿಸಿದೆ. ಕಳೆದ ಎರಡು ತಿಂಗಳುಗಳಲ್ಲಿ RSS ಮುಖ್ಯಸ್ಥ ಮೋಹನ್ ಭಾಗವತ್, ಉತ್ತರ ಪ್ರದೇಶ ಪ್ರವಾಸದ ಸಂದರ್ಭದಲ್ಲಿ ಪ್ರಾಂತ್ಯವಾರು ಸರಣಿ ಸಭೆಗಳನ್ನು ನಡೆಸಿದ್ದರು. ಇನ್ನು ಮುಖ್ಯಮಂತ್ರಿಗಳು ಸಹ ರಾಜ್ಯಾದ್ಯಂತ ಸಂಘದೊಂದಿಗೆ ಸಮನ್ವಯ ಸಭೆಗಳನ್ನು ಸಹ ನಡೆಸಿದ್ದಾರೆ.

ಸಭೆಯಲ್ಲಿ ಅವಧ್, ಕಾಶಿ, ಬ್ರಜ್, ಕಾನ್ಪುರ, ಗೋರಕ್ಷ ಮತ್ತು ಪಶ್ಚಿಮ ಪ್ರಾಂತ್ಯಗಳ ಬಿಜೆಪಿ ಪದಾಧಿಕಾರಿಗಳು ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು. ಕೆಲವು ಸಚಿವರು ಮತ್ತು ಶಾಸಕರ ನಡುವಿನ ಸಮನ್ವಯದ ಕೊರತೆಯಿಂದ ಸಂಘಟನಾ ಕೆಲಸದ ಮೇಲೆ ಪರಿಣಾಮ ಬೀರುತ್ತಿದೆ ಎಂಬುದನ್ನು ಚರ್ಚಿಸಲಾಯಿತು. ವಿವಾದಾತ್ಮಕ ಹೇಳಿಕೆಗಳು ಸರ್ಕಾರದೊಳಗೆ ಸಂಘರ್ಷ ಅಥವಾ ಸರ್ಕಾರ ಮತ್ತು ಸಂಘಟನೆಯ ನಡುವಿನ ಭಿನ್ನಾಭಿಪ್ರಾಯಗಳನ್ನು ಹೆಚ್ಚಿಸಬಹುದು.

ಚುನಾವಣೆಗೆ ಮುಂಚಿತವಾಗಿ ಆರ್‌ಎಸ್‌ಎಸ್, ರಾಜ್ಯ ಸರ್ಕಾರ ಮತ್ತು ಬಿಜೆಪಿ ನಡುವೆ ಒಗ್ಗಟ್ಟನ್ನು ಕಾಪಾಡಿಕೊಳ್ಳುವ ಬಗ್ಗೆ ಸಭೆಯಲ್ಲಿ ಒಪ್ಪಂದ ಮಾಡಿಕೊಳ್ಳಲಾಯಿತು. ಲವ್ ಜಿಹಾದ್, ಅಕ್ರಮ ಮತಾಂತರ ಮತ್ತು ನೇಪಾಳದ ಗಡಿಯಲ್ಲಿರುವ ಜಿಲ್ಲೆಗಳಲ್ಲಿ ಜಾಗರೂಕತೆಯನ್ನು ಕಾಯ್ದುಕೊಳ್ಳುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು. ಮುಂಬರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಜಾತಿಯ ಬದಲು ರಾಷ್ಟ್ರೀಯತೆಯ ಮೇಲೆ ಕೇಂದ್ರೀಕರಿಸುವ ಅಗತ್ಯವನ್ನು ಆರ್‌ಎಸ್‌ಎಸ್ ಒತ್ತಿ ಹೇಳಿದೆ. ಸಚಿವರು ಮತ್ತು ಶಾಸಕರು ಜಾತಿ ಸಂಬಂಧಿತ ವಿಷಯಗಳ ಬಗ್ಗೆ ಮಾತನಾಡುವುದನ್ನು ತಪ್ಪಿಸಿ ರಾಷ್ಟ್ರೀಯತೆಯ ಮೇಲೆ ಕೇಂದ್ರೀಕರಿಸಬೇಕು ಎಂದು ಸಹ ಸೂಚಿಸಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries