ಮುಂಬೈ: ನೆರೆಯ ಗುಜರಾತ್ನ ಜಾಮ್ನಗರದಲ್ಲಿರುವ ರಿಲಯನ್ಸ್ ಫೌಂಡೇಶನ್ನ ವಂತಾರಾ ವನ್ಯಜೀವಿ ಸಂರಕ್ಷಣೆ ಹಾಗೂ ಪಾಲನಾ ಕೇಂದ್ರಕ್ಕೆ 50 ಚಿರತೆಗಳನ್ನು ಕಳುಹಿಸಲು ಮಹಾರಾಷ್ಟ್ರ ಸರ್ಕಾರ ತೀರ್ಮಾನಿಸಿದೆ ಎಂದು ರಾಜ್ಯ ಅರಣ್ಯ ಸಚಿವ ಗಣೇಶ್ ನಾಯ್ಕ್ ಹೇಳಿದ್ದಾರೆ.
ಚಿರತೆಗಳ ಸಂರಕ್ಷಣೆ ಪ್ರಯತ್ನಕ್ಕೆ ಬೆಂಬಲಿಸಲು ಹಾಗೂ ರಾಜ್ಯದ ಕೆಲವು ಭಾಗಗಳಲ್ಲಿ ಹೆಚ್ಚುತ್ತಿರುವ ಮಾನವ-ಚಿರತೆ ಸಂಘರ್ಷಕ್ಕೆ ಸಂಬಂಧಿಸಿದ ಆತಂಕಗಳನ್ನು ನಿವಾರಿಸಲು ಅರಣ್ಯ ಇಲಾಖೆ ಈ ನಿರ್ಧಾರ ತಾಳಿದೆಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಯಾವಾಗ, ಹೇಗೆ ಹಸ್ತಾಂತರಿಸಲಾಗುತ್ತದೆ ಎನ್ನುವುದರ ಬಗ್ಗೆ ಅರಣ್ಯ ಇಲಾಖೆ ಅಂತಿಮಗೊಳಿಸಲಿದೆ.
2025ರ ನವೆಂಬರ್ ಹಾಗೂ ಡಿಸೆಂಬರ್ನಲ್ಲಿ ಮಹಾರಾಷ್ಟ್ರದ ಹಲವು ಭಾಗಗಳಲ್ಲಿ ಚಿರತೆ ದಾಳಿಯ ಪ್ರಕರಣಗಳು ವರದಿಯಾಗಿದ್ದವು.

