HEALTH TIPS

ಕವಡಿಯಾರ್ ಅರಮನೆಯ ಚಿನ್ನ ಕಳ್ಳತನ: ವಿಶೇಷ ತಂಡಕ್ಕೆ ತನಿಖೆ; 60 ಕ್ಕೂ ಹೆಚ್ಚು ಜನರ ಹೇಳಿಕೆ ಸಂಗ್ರಹ

ತಿರುವನಂತಪುರಂ: ಕವಡಿಯಾರ್ ಅರಮನೆಯಲ್ಲಿ ನಡೆದ ಚಿನ್ನಾಭರಣ ಕಳ್ಳತನ ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ ಹಸ್ತಾಂತರಿಸಲಾಗಿದೆ. ಕಂಟೋನ್ಮೆಂಟ್ ಸಹಾಯಕ ಆಯುಕ್ತ ಜಿ. ಅಜಯನಾಥ್ ನೇತೃತ್ವದ ತಂಡವು ತನಿಖೆ ನಡೆಸುತ್ತಿದೆ. ಅರಮನೆಯಿಂದ ಸುಮಾರು 2 ಕೋಟಿ ರೂ. ಮೌಲ್ಯದ ಆಭರಣಗಳನ್ನು ಕಳವು ಮಾಡಲಾಗಿದೆ. ಆರಂಭದಲ್ಲಿ ಪೆರೂರ್ಕಡ ಪೋಲೀಸರು ತನಿಖೆ ನಡೆಸುತ್ತಿದ್ದ ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ ಹಸ್ತಾಂತರಿಸಲಾಗಿದೆ. ಅರಮನೆಯ ಸಿಬ್ಬಂದಿ ಮತ್ತು ರಾಜಮನೆತನದ ಸದಸ್ಯರ ಸಂಬಂಧಿಕರ ಹೇಳಿಕೆಗಳನ್ನು ದಾಖಲಿಸಲಾಗುತ್ತಿದೆ. ಇದು ಪೂರ್ಣಗೊಂಡ ನಂತರ, ವೈಜ್ಞಾನಿಕ ಪರೀಕ್ಷೆಗಳನ್ನು ನಡೆಸಲಾಗುವುದು. 


ಪ್ರಾಥಮಿಕ ಪರೀಕ್ಷೆಗಳ ಸಮಯದಲ್ಲಿ ಪಡೆದ ಪೋನ್ ದಾಖಲೆಗಳು ಮತ್ತು ಸಾಕ್ಷ್ಯಗಳನ್ನು ತಂಡವು ವಿಶ್ಲೇಷಿಸುತ್ತದೆ. ಇದರ ನಂತರವೇ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ. ಅರಮನೆಯ ಕ್ಯಾಮೆರಾ ದೃಶ್ಯಗಳನ್ನು ಸಹ ಸಂಗ್ರಹಿಸಲಾಗುವುದು. ಬೆರಳಚ್ಚು ತಜ್ಞರು ಅರಮನೆಯನ್ನು ಪರಿಶೀಲಿಸಿರುವರು. ಕಳ್ಳತನಕ್ಕೆ ಸಂಬಂಧಿಸಿದಂತೆ ಪೋಲೀಸರು ಅರಮನೆಯ ಖಾಯಂ ನಿವಾಸಿಗರು ಮತ್ತು ನೌಕರರು ಸೇರಿದಂತೆ 60 ಕ್ಕೂ ಹೆಚ್ಚು ಜನರ ಹೇಳಿಕೆಗಳನ್ನು ಸಂಗ್ರಹಿಸುತ್ತಿದ್ದಾರೆ. ಅರ್ಧಕ್ಕಿಂತ ಹೆಚ್ಚು ಜನರು ತಮ್ಮ ಹೇಳಿಕೆಗಳನ್ನು ನೀಡಿದ್ದಾರೆ ಎಂದು ವರದಿಯಾಗಿದೆ. ದೂರು ತಿಂಗಳುಗಳ ನಂತರ ಬಂದಿರುವುದರಿಂದ, ವೈಜ್ಞಾನಿಕ ಪುರಾವೆಗಳು ಮತ್ತು ತಾಂತ್ರಿಕ ಸಹಾಯದಿಂದ ಮಾತ್ರ ಮುಂದುವರಿಯಲು ಸಾಧ್ಯ. ಕದ್ದ ವಸ್ತುಗಳನ್ನು ಮಾರಾಟ ಮಾಡಲಾಗಿದೆಯೇ ಎಂದು ಪೋಲೀಸರು ಪರಿಶೀಲಿಸುತ್ತಿದ್ದಾರೆ.  







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries