ಹೈದರಾಬಾದ್: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು 'ತೆಲಂಗಾಣ ದ್ವೇಷ ಭಾಷಣ ಮತ್ತು ದ್ವೇಷಾಪರಾಧಗಳ ತಡೆ ಮಸೂದೆ-2026' ಅನ್ನು ವಿಧಾನಸಭೆಯಲ್ಲಿ ಭಾನುವಾರ ಮಂಡಿಸಿದೆ.
ದ್ವೇಷ ಭಾಷಣಕ್ಕೆ ಸಂಬಂಧಿಸಿದ ಅಪರಾಧ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಗರಿಷ್ಠ 10 ವರ್ಷ ಜೈಲು ಶಿಕ್ಷೆ ವಿಧಿಸುವ ಪ್ರಸ್ತಾವವನ್ನು ಈ ಮಸೂದೆ ಒಳಗೊಂಡಿದೆ.
ಒಂದೊಮ್ಮೆ, ಈ ಮಸೂದೆಯು ಅಂಗೀಕಾರಗೊಂಡು ಕಾಯ್ದೆಯಾದಲ್ಲಿ ಕರ್ನಾಟಕದ ನಂತರ ಇಂತಹ ಕ್ರಮ ಕೈಗೊಳ್ಳುವ ಎರಡನೇ ರಾಜ್ಯ ತೆಲಂಗಾಣ ಆಗಲಿದೆ.
ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ ಅವರ ಪರವಾಗಿ ಸಂಸದೀಯ ವ್ಯವಹಾರಗಳ ಸಚಿವ ಡಿ.ಶ್ರೀಧರ ಬಾಬು ಈ ಮಸೂದೆ ಮಂಡಿಸಿದರು.

