ಪಶ್ಚಿಮ ಏಷ್ಯಾ ಬಿಕ್ಕಟ್ಟು ಆರಂಭಗೊಂಡ ಬಳಿಕ, ಪ್ರಧಾನಿ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿಗಳ ಜೊತೆ ಸಂವಾದ ನಡೆಸಿದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಅವರೂ ಉಪಸ್ಥಿತರಿದ್ದರು.
ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ, ವಿಧಾನಸಭೆ ಚುನಾವಣೆ ನಡೆಯಲಿರುವ ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ ಹಾಗೂ ಪುದುಚೆರಿ ಮುಖ್ಯಮಂತ್ರಿಗಳು ಪಾಲ್ಗೊಂಡಿರಲಿಲ್ಲ.
ಈ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಂಪುಟ ಕಾರ್ಯದರ್ಶಿ ಪ್ರತ್ಯೇಕವಾಗಿ ಸಂವಾದ ನಡೆಸುವರು ಎಂದು ಮೂಲಗಳು ಹೇಳಿವೆ.
ಎನ್.ಚಂದ್ರಬಾಬು ನಾಯ್ಡು(ಆಂಧ್ರ ಪ್ರದೇಶ), ಯೋಗಿ ಆದಿತ್ಯನಾಥ (ಉತ್ತರ ಪ್ರದೇಶ),ರೇವಂತ ರೆಡ್ಡಿ (ತೆಲಂಗಾಣ), ಭಗವಂತ ಮಾನ್ (ಪಂಜಾಬ್),ಭೂಪೇಂದ್ರ ಪಟೇಲ್ (ಗುಜರಾತ್),ಒಮರ್ ಅಬ್ದುಲ್ಲಾ (ಜಮ್ಮು ಮತ್ತು ಕಾಶ್ಮೀರ),ಸುಖ್ವಿಂದರ್ ಸಿಂಗ್ ಸುಕ್ಕು (ಹಿಮಾಚಲ ಪ್ರದೇಶ), ಪೆಮಾ ಖಂಡು (ಅರುಣಾಚಲ ಪ್ರದೇಶ) ಸೇರಿ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಪಾಲ್ಗೊಂಡಿದ್ದರು ಎಂದು ಇವೇ ಮೂಲಗಳು ಹೇಳಿವೆ.

