ಬದಿಯಡ್ಕ: ಜಿಲ್ಲೆಯ ಚೆಂಗಳ ಪಂಚಾಯತಿಯ ಒಂದನೇ ವಾರ್ಡಿನ ಮೀನಾಡಿಪಳ್ಳ ಯಮುನಾ ಎಂಬವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಕಾಸರಗೋಡು ತಾಲೂಕಿನ ವಾತ್ಸಲ್ಯ ಮನೆಯ ಹಸ್ತಾಂತರ ಸೋಮವಾರ ನಡೆಯಿತು. ಜನಜಾಗೃತಿ ವೇದಿಕೆ ಅಧ್ಯಕ್ಷ ಅಖಿಲೇಶ್ ನಗಮಗಂ ಅವರ ಅಧ್ಯಕ್ಷತೆಯಲ್ಲಿ ಚೆಂಗಳ ಗ್ರಾಮ ಪಂಚಾಯಿತಿ ಅಧ್ಯಕ್ಷ ವಸಂತ ಅಜಕ್ಕೋಡು ನಾಮಫಲಕ ಅನಾವರಣ ಮಾಡಿದರು. ದಕ್ಷಿಣ ಕನ್ನಡ -2 ಜಿಲ್ಲೆಯ ನಿರ್ದೇಶಕ ಬಾಬು ನಾಯ್ಕ ಫಲ ಪುಷ್ಪದೊಂದಿಗೆ ಮನೆಯ ಕೀಲಿಕೈ ನೀಡಿ ವಾತ್ಸಲ್ಯ ಮನೆ ಹಸ್ತಾಂತರ ಮಾಡಲಾಯಿತು. ಜನಜಾಗೃತಿ ಸದಸ್ಯ ನವೀನ್ ಭಟ್, ಲಕ್ಷ್ಮೀ ಶೆಟ್ಟಿ ಮಾನ್ಯ, ಬದಿಯಡ್ಕ ಗ್ರಾಮ ಪಂಚಾಯತಿ ಸದಸ್ಯ ಶ್ಯಾಮ್ ಪ್ರಸಾದ್ ಮಾನ್ಯ, ತಾಲೂಕು ಯೋಜನಾಧಿಕಾರಿ ದಿನೇಶ್, ಜ್ಞಾನವಿಕಾಸ ಸಮನ್ವಯಾಧಿಕಾರಿ ಸೌಮ್ಯ ಗಿರೀಶ್, ಮಾನ್ಯ ಕಾರ್ಯಕ್ಷೇತ್ರ ಸೇವಾ ಪ್ರತಿನಿಧಿ ಹೇಮಲತಾ, ಎಡನೀರು ಕಾರ್ಯಕ್ಷೇತ್ರ ಸೇವಾ ಪ್ರತಿನಿಧಿ ರಾಜೀವಿ, ಮಾನ್ಯ ಒಕ್ಕೂಟದ ಅಧ್ಯಕ್ಷ ಸುನಿಲ್ ಮತ್ತು ಸ್ಥಳೀಯ ಗಣ್ಯರು ಉಪಸ್ಥಿತರಿದ್ದರು

.jpg)
