ಮಂಜೇಶ್ವರ: ಅಪ್ರಾಪ್ತರು ದ್ವಿಚಕ್ರ ವಾಹನ ಚಲಾಯಿಸುತ್ತಿರುವುದರ ವಿರುದ್ಧ ಮಂಜೇಶ್ವರ ಠಾಣೆ ಪೊಲೀಸರು ಕಾರ್ಯಾಚರಣೆ ಚುರುಕುಗೊಳಿಸಿದ್ದು, ಶನಿವಾರ ಸಂಜೆಯಿಂದ ಭಾನುವಾರ ಬೆಳಗ್ಗಿನ ವರೆಗೆ ಎರಡು ಸ್ಕೂಟರ್ಗಳನ್ನು ವಶಕ್ಕೆ ತೆಗೆದುಕೊಂಡಿದ್ದು, ಪೋಷಕರ ವಿರುದ್ಧ ಕೇಸು ದಾಖಲಿಸಿಕೊಂಡು ನೋಟೀಸು ನೀಡಿದ್ದಾರೆ.
ಬೇಕೂರು ಮಸೀದಿ ವಠಾರದಿಂದ ಹಾಗೂ ತಲಪ್ಪಾಡಿಯಿಂದ ಈ ಸ್ಕೂಟರ್ ವಶಪಡಿಸಿಕೊಳ್ಳಲಾಗಿದೆ. ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಮಾಸಿಕ 20ಕ್ಕೂ ಹೆಚ್ಚು ಇಂತಹ ಪ್ರಕರಣ ದಾಖಲಾಗುತ್ತಿದ್ದು, ನ್ಯಾಯಾಲಯದಲ್ಲಿ ಇಂತಹ ಪ್ರಕರಣಗಳಿಗೆ ತಲಾ 20ಸಾವಿರ ರಊ. ದಂಡ ವಿಧಿಸಲಾಗುತ್ತಿದ್ದರೂ, ಅಪ್ರಾಪ್ತರ ವಾಹನ ಚಲಾವಣೆ ಸಂಖ್ಯೆ ಹೆಚ್ಚುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

