HEALTH TIPS

ಮಾತೃತ್ವದ ಹಾದಿಯಲ್ಲಿ ವಿದ್ಯಾರ್ಥಿಗಳ ಹೆಜ್ಜೆ: ಕುಂಜತ್ತೂರು-ಹೊಸಂಗಡಿ ಪೀಸ್ ಕ್ರಿಯೇಟಿವ್ ಶಾಲೆ ವತಿಯಿಂದ ರಂಜಾನ್ ಕಿಟ್ ವಿತರಣೆ

ಮಂಜೇಶ್ವರ : ಪವಿತ್ರ ರಂಜಾನ್ ತಿಂಗಳು ಕೇವಲ ಉಪವಾಸಕ್ಕಷ್ಟೇ ಸೀಮಿತವಲ್ಲ, ಅದು ದಾನ-ಧರ್ಮ ಹಾಗೂ ಪರಸ್ಪರ ಸಹಕಾರದ ಸಂಕೇತವೂ ಹೌದು ಎಂಬುದನ್ನು ಕುಂಜತ್ತೂರು ಮತ್ತು ಹೊಸಂಗಡಿ ಪೀಸ್ ಕ್ರಿಯೇಟಿವ್ ಶಾಲೆಯ  ವಿದ್ಯಾರ್ಥಿಗಳು ಪ್ರತ್ಯಕ್ಷವಾಗಿ ತೋರಿಸಿಕೊಟ್ಟಿದ್ದಾರೆ.


ಪವಿತ್ರ ಮಾಸದ ಹಿನ್ನೆಲೆಯಲ್ಲಿ ಸಮಾಜದ ದುರ್ಬಲ ವರ್ಗದವರ ಕಣ್ಣೀರು ಒರೆಸುವ ಮಹತ್ತರ ಉದ್ದೇಶದೊಂದಿಗೆ, ಶಾಲಾ ವಿದ್ಯಾರ್ಥಿಗಳು ಸ್ವಯಂಪ್ರೇರಿತರಾಗಿ ಹಸಿದವರಿಗೆ ಅನ್ನ, ಬಟ್ಟೆ ಹಾಗೂ ಧಾರ್ಮಿಕ ಮಾರ್ಗದರ್ಶನದ ಹರಿಕಾರರಾಗಿ ಹೊರಹೊಮ್ಮಿದ್ದಾರೆ.

ವಿದ್ಯಾರ್ಥಿಗಳು ಶ್ರಮವಹಿಸಿ ಸಂಗ್ರಹಿಸಿದ ಮತ್ತು ಸಿದ್ಧಪಡಿಸಲಾದ ದಿನಬಳಕೆಯ ಅಗತ್ಯ ದಿನಸಿ ಪದಾರ್ಥಗಳನ್ನೊಳಗೊಂಡ ಕಿಟ್‍ಗಳು, ಆಧ್ಯಾತ್ಮಿಕ ಚಿಂತನೆಗಾಗಿ ಪವಿತ್ರ ಖುರಾನ್ ಗ್ರಂಥದ ಪ್ರತಿಗಳು ಅತ್ಯಂತ ಅಗತ್ಯವಿರುವ ಕುಟುಂಬಗಳಿಗೆ ಆರ್ಥಿಕ ನೆರವು

ಅರ್ಹ ಫಲಾನುಭವಿಗಳಿಗೆ ಅತ್ಯಂತ ಗೌರವಪೂರ್ವಕವಾಗಿ ವಿತರಿಸಲಾಯಿತು.

ಶಿಕ್ಷಣ ಎಂದರೆ ಕೇವಲ ಪುಸ್ತಕದ ಜ್ಞಾನವಲ್ಲ, ಅದು ಮಾನವೀಯತೆಯನ್ನು ಮೈಗೂಡಿಸಿಕೊಳ್ಳುವುದು ಕೂಡ ಆಗಿದೆ. ನಮ್ಮ ವಿದ್ಯಾರ್ಥಿಗಳು ಸಣ್ಣ ವಯಸ್ಸಿನಲ್ಲೇ ಇಂತಹ ಉದಾತ್ತ ಚಿಂತನೆ ಹೊಂದಿರುವುದು ಹೆಮ್ಮೆಯ ವಿಷಯ. ಎಂದು ಶಾಲಾ ಪ್ರಾಂಶುಪಾಲರು ಅಭಿಪ್ರಾಯ ವ್ಯಕ್ತಪಡಿಸಿದರು. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries