ಮಧೂರು: ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಜಗದೀಶ್ ಪ್ರಸಾದ್ ಕೂಡ್ಲು ಅವರು ಮಾ. 31ರಂದು ಸೇವೆಯಿಂದ ನಿವೃತ್ತರಗಲಿದ್ದಾರೆ. ದೀರ್ಘ ಕಾಲದ ತಮ್ಮ ಸೇವೆಯಲ್ಲಿ ಮಲಬಾರ್ ದೇವಸ್ವಂ ಬೋರ್ಡ್ನ ನೂರಕ್ಕೂ ಹೆಚ್ಚು ದೇವಾಲಯಗಳಲ್ಲಿ ಸೇವೆ ಸಲ್ಲಿಸಿರುವ ಇವರು, ಮಧೂರು, ಕಾಸರಗೋಡು ಶ್ರೀ ಮಲ್ಲಿಕಾರ್ಜುನ ದೇವಸ್ಥಾನ, ಆರಿಕ್ಕಾಡಿಪಾರೆಸ್ಥಾನ ಆಲಿಚಾಮುಂಡಿ ಕ್ಷೇತ್ರ ಸೇರಿದಂತೆ ಹಲವು ದೇಗುಲಗಳಲ್ಲಿ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಜನಮೆಚ್ಚುಗೆಗೆ ಪಾತ್ರರಾಗಿದ್ದಾರೆ.


