HEALTH TIPS

ವಿಧಾನಸಭಾ ಚುನಾವಣೆ: ಜಿಲ್ಲೆಯ ಸಿದ್ಧತೆ ಪರಿಶೀಲಿಸಿದ ಚುನಾವಣಾ ವೀಕ್ಷಕರು

ಕಾಸರಗೋಡು: ಕೇರಳ ವಿಧಾನಸಭಾ ಚುನಾವಣೆ 2026 ಕಾಸರಗೋಡು ಜಿಲ್ಲೆಯ ವಿವಿಧ ಕ್ಷೇತ್ರಗಳಿಗೆ ಕೇಂದ್ರ ಚುನಾವಣಾ ಆಯೋಗದಿಂದ ನೇಮಿಸಲ್ಪಟ್ಟ ವಿವಿಧ ವೀಕ್ಷಕರು ಕಲೆಕ್ಟರೇಟ್‍ನಲ್ಲಿ ನಡೆದ ಚುನಾವಣಾ ಅಧಿಕಾರಿಗಳ ಸಭೆಯಲ್ಲಿ ಸಿದ್ಧತೆಗಳನ್ನು ಪರಿಶೀಲಿಸಿದರು. ಜಿಲ್ಲಾ ಚುನಾವಣಾ ಅಧಿಕಾರಿ, ಜಿಲ್ಲಾಧಿಕಾರಿ ಅರ್ಜುನ್ ಪಾಂಡಿಯನ್ ಅಧ್ಯಕ್ಷತೆ ವಹಿಸಿದ್ದರು.  


ಉದುಮ, ಕಾಞಂಗಾಡ್ ಮತ್ತು ತ್ರಿಕರಿಪುರ ಕ್ಷೇತ್ರಗಳ ಸಾಮಾನ್ಯ ವೀಕ್ಷಕ ಜ್ಞಾನೇಶ್ವರ ಕೊಂಡಿಭಾವು ಖಿಲಾರಿ, ಮಂಜೇಶ್ವರ ಮತ್ತು ಕಾಸರಗೋಡು ಕ್ಷೇತ್ರಗಳ ಸಾಮಾನ್ಯ ವೀಕ್ಷಕ ವಿಜಯ್ ಬಾಲಕೃಷ್ಣ ವಾಘ್ಮಾರ್,  ಉದುಮ ಕ್ಷೇತ್ರದ ವೆಚ್ಚ ವೀಕ್ಷಕ ಕಾಸರಗೋಡು ಮಂಜೇಶ್ವರ ಜಿಲ್ಲಾ ಪೋಲೀಸ್ ವೀಕ್ಷಕ ಅಶುತೋಷ್ ಕುಮಾರ್, ತ್ರಿಕರಿಪುರ ಕ್ಷೇತ್ರಗಳ ವೆಚ್ಚ ವೀಕ್ಷಕ ನಿಶಾಂತ್ ಅಗರ್ವಾಲ್, ತ್ರಿಕರಿಪುರ ಕ್ಷೇತ್ರಗಳ ವೆಚ್ಚ ವೀಕ್ಷಕ ಅಜಯ್ ಕುಮಾರ್ ತಡಿಯಾ, ಜಿಲ್ಲೆಯ ವಿವಿಧ ನೋಡಲ್ ಅಧಿಕಾರಿಗಳು ಮತ್ತು ಚುನಾವಣಾ ಅಧಿಕಾರಿಗಳ ಸಭೆಯಲ್ಲಿ ಸಿದ್ಧತೆಗಳನ್ನು ಪರಿಶೀಲಿಸಿದರು. ಜಿಲ್ಲೆಯಲ್ಲಿ ನಡೆಯುತ್ತಿರುವ ಚುನಾವಣಾ ಸಿದ್ಧತೆಗಳ ಬಗ್ಗೆ ವೀಕ್ಷಕರು ತೃಪ್ತಿ ವ್ಯಕ್ತಪಡಿಸಿದರು. ವಿವಿಧ ಕ್ಷೇತ್ರಗಳ ಚುನಾವಣಾ ಅಧಿಕಾರಿಗಳು, ವಿವಿಧ ನೋಡಲ್ ಅಧಿಕಾರಿಗಳು, ಚುನಾವಣಾ ಉಪ ಕಲೆಕ್ಟರ್ ಮತ್ತು ಚುನಾವಣಾ ಇಲಾಖೆ ನೌಕರರು ಸಭೆಯಲ್ಲಿ ಭಾಗವಹಿಸಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries