ನವದೆಹಲಿ: ಎನ್ಸಿಇಆರ್ಟಿಯ ಎಂಟನೇ ತರಗತಿ ಪುಸ್ತಕದ 'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಕುರಿತ ಅಧ್ಯಾಯದ ಪರಿಶೀಲನೆಗಾಗಿ ಸುಪ್ರೀಂ ಕೋರ್ಟ್ನ ಇಬ್ಬರು ನಿವೃತ್ತ ನ್ಯಾಯಮೂರ್ತಿಗಳು ಮತ್ತು ಮಾಜಿ ಅಟಾರ್ನಿ ಜನರಲ್ ಅವರನ್ನುಒಳಗೊಂಡ ಸಮಿತಿಯನ್ನು ರಚನೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ಗೆ ಶುಕ್ರವಾರ ತಿಳಿಸಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜಾಯ್ಮಾಲ್ಯಾ ಬಾಗ್ಚಿ, ವಿಪುಲ್ ಎಂ.ಪಾಂಚೋಲಿ ಅವರಿಗೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಈ ಮಾಹಿತಿ ತಿಳಿಸಿದರು.
ನಿವೃತ್ತ ನ್ಯಾಯಮೂರ್ತಿಗಳಾದ ಇಂದು ಮಲ್ಹೋತ್ರಾ, ಅನಿವೃದ್ಧ ಬೋಸ್ ಹಾಗೂ ಮಾಜಿ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಅವರನ್ನು ಸಮಿತಿಯು ಒಳಗೊಂಡಿದೆ ಎಂದು ತಿಳಿಸಿದರು.

