ತಿರುವನಂತಪುರಂ: ಕೇಂದ್ರ ಸರ್ಕಾರದ ಪಿಎಂ ಶ್ರೀ ಯೋಜನೆಯನ್ನು ರಾಜ್ಯದಲ್ಲಿ ಜಾರಿಗೆ ತರಲಾಗುವುದಿಲ್ಲ ಎಂದು ಸಾಮಾನ್ಯ ಶಿಕ್ಷಣ ಸಚಿವ ವಿ. ಶಿವನ್ ಕುಟ್ಟಿ ಪುನರುಚ್ಚರಿಸಿದ್ದಾರೆ. ಸಮಗ್ರ ಶಿಕ್ಷಾ ಕೇರಳದ ಮೂಲಕ ಪಡೆಯಬೇಕಾದ ಆರ್ಥಿಕ ನೆರವು ಅಗತ್ಯವಿಲ್ಲ ಮತ್ತು ಶಾಲೆಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗಾಗಿ ಈಗಾಗಲೇ 5000 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ ಎಂದು ಅವರು ಹೇಳಿದ್ದಾರೆ.
ನಾಗರಿಕ ಪ್ರಜ್ಞೆ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಕಾಯ್ದುಕೊಳ್ಳುವ ವಿದ್ಯಾರ್ಥಿಗಳನ್ನು ಸರ್ಕಾರ ಗೌರವಿಸುತ್ತದೆ ಎಂದು ಸಚಿವರು ಹೇಳಿದರು. ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳನ್ನು ಜವಾಬ್ದಾರಿಯುತ ಮತ್ತು ಉತ್ತಮ ನಾಗರಿಕರನ್ನಾಗಿ ಮಾಡುವ ಉದ್ದೇಶದಿಂದ ಪ್ರಾರಂಭಿಸಿರುವ 'ಸ್ಟೆಪ್ 2026' ಯೋಜನೆಯನ್ನು ಸಚಿವರು ಪ್ರಕಟಿಸದರು. ಮತ್ತು ತಿರುವನಂತಪುರಂ ಶಿಕ್ಷಕ ಸದನದಲ್ಲಿ ಪರಿಷ್ಕೃತ ಹೈಯರ್ ಸೆಕೆಂಡರಿ ಮತ್ತು ವೊಕೇಶನಲ್ ಹೈಯರ್ ಸೆಕೆಂಡರಿ ಪ್ರಥಮ ವರ್ಷದ ಪಠ್ಯಪುಸ್ತಕಗಳು ಮತ್ತು ಶಾಲಾ ಸುರಕ್ಷತಾ ಕೈಪಿಡಿಯನ್ನು ಬಿಡುಗಡೆ ಮಾಡಿ ಮಾತನಾಡಿದರು.

