ತಿರುವನಂತಪುರಂ: ಬೇಸಿಗೆ ರಜೆಯನ್ನು ಕಡಿತಗೊಳಿಸಲಾಗಿದೆ ಎಂಬ ಸುಳ್ಳು ಪ್ರಚಾರ ಹರಡುತ್ತಿದ್ದು, ಇದರ ವಿರುದ್ಧ ಸಾರ್ವಜನಿಕ ಶಿಕ್ಷಣ ಇಲಾಖೆ ಕಾನೂನು ಕ್ರಮ ಕೈಗೊಳ್ಳುತ್ತಿದೆ. ಕೇರಳದ ಶಿಕ್ಷಣ ಸಂಸ್ಥೆಗಳ ಬೇಸಿಗೆಯ ಮಧ್ಯ ರಜೆಯನ್ನು ಒಂದು ತಿಂಗಳಿಗೆ ಇಳಿಸಲು ಆದೇಶ ಹೊರಡಿಸಲಾಗಿದೆ ಎಂಬ ಸಂದೇಶ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಇದು ಸುಳ್ಳು ಎಂದು ಸಾರ್ವಜನಿಕ ಶಿಕ್ಷಣ ಕಾರ್ಯದರ್ಶಿ ತಿಳಿಸಿದ್ದಾರೆ.
ರಜೆ ನಿಗದಿಯಂತೆ ಇದೆ. ಇದರಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಶಿಕ್ಷಣ ಇಲಾಖೆಯ ಹೆಸರಿನಲ್ಲಿ ದಾಖಲೆಗಳನ್ನು ನಕಲಿ ಮಾಡುವ ಮೂಲಕ ಇಂತಹ ಸುಳ್ಳು ಸಂದೇಶವನ್ನು ಹರಡಲಾಗುತ್ತಿದೆ.
ವಿದ್ಯಾರ್ಥಿಗಳು, ಪೆÇೀಷಕರು ಮತ್ತು ಶಿಕ್ಷಕರಲ್ಲಿ ಅನಗತ್ಯ ಭೀತಿ ಸೃಷ್ಟಿಸುವ ಉದ್ದೇಶಪೂರ್ವಕ ಪ್ರಯತ್ನ ಇದು. ಪ್ರಸ್ತುತ ವ್ಯವಸ್ಥೆಗಳನ್ನು ಬದಲಾಯಿಸಲು ಸರ್ಕಾರ ಯಾವುದೇ ಆದೇಶ ಹೊರಡಿಸಿಲ್ಲ.
ಸಾಮಾನ್ಯ ಶಿಕ್ಷಣ ಕಾರ್ಯದರ್ಶಿಯವರ ಹೆಸರು ಮತ್ತು ಸ್ಥಾನವನ್ನು ದುರುಪಯೋಗಪಡಿಸಿಕೊಂಡು ದಾಖಲೆಗಳನ್ನು ನಕಲಿ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಕಾನೂನುಬಾಹಿರ ಚಟುವಟಿಕೆಯ ತನಿಖೆ ನಡೆಸಿ ಅಪರಾಧಿಗಳನ್ನು ಪತ್ತೆ ಹಚ್ಚಲು ರಾಜ್ಯ ಪೆÇಲೀಸ್ ಮುಖ್ಯಸ್ಥರಿಗೆ ದೂರು ಸಲ್ಲಿಸಲಾಗಿದೆ ಎಂದು ಸಾಮಾನ್ಯ ಶಿಕ್ಷಣ ಕಾರ್ಯದರ್ಶಿ ಡಾ. ಕೆ. ವಾಸುಕಿ ಐಎಎಸ್ ತಿಳಿಸಿದ್ದಾರೆ.
ಇಂತಹ ಸುಳ್ಳು ಪ್ರಚಾರವನ್ನು ಅಧಿಕೃತ ಮೂಲಗಳಿಂದ ಹೊರತುಪಡಿಸಿ ನಂಬಬಾರದು ಮತ್ತು ಹರಡಬಾರದು ಎಂದು ಸಾಮಾನ್ಯ ಶಿಕ್ಷಣ ಕಾರ್ಯದರ್ಶಿ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

