ಮಧೂರು: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಬಿಎಂಎಸ್ ಕಾಸರಗೋಡು ಜಿಲ್ಲಾ ಸಮಿತಿ ವತಿಯಿಂದ ಮಧೂರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಯಿತು. 'ಸಮರ್ಪಿಸುವ-ಬೆಳೆಯುವ-ಸಮಾಜದೊಂದಿಗೆ'ಎಂಬ ಧ್ಯೇಯದೊಂದಿಗೆ ಮಹಿಳಾ ದಿನವನ್ನು ಆಚರಿಸಲಾಯಿತು.
ಮಧೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಜ್ಞಾನಿ ಶ್ಯಾನುಭಾಗ್ ಸಮಾರಂಭ ಉದ್ಘಾಟಿಸಿದರು. ಬಿಎಂಎಸ್ ಜಿಲ್ಲಾ ಜತೆ ಕಾರ್ಯದರ್ಶಿ ಯಶವಂತಿ ಬೆಜ್ಜ ಅಧ್ಯಕ್ಷತೆ ವಹಿಸಿದ್ದರು. ವಕೀಲೆ ಆಶಾಮೋಳ್ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣ ಮಾಡಿದರು.
ಕಾರ್ಯಕ್ರಮದಲ್ಲಿ ಅತ್ಯುತ್ತಮ ಗ್ರಾಮಾಧಿಕಾರಿ ಪ್ರಶಸ್ತಿ ಪಡೆದ ಟಿ.ಕೆ. ಜಯಲಕ್ಷ್ಮಿ , ಅತ್ಯುತ್ತಮ ಅಂಗನವಾಡಿ ಶಿಕ್ಷಕಿ ಪ್ರಶಸ್ತಿ ಪಡೆದ ವಿಶಾಲಾಕ್ಷಿ ಅವರನ್ನು ಸನ್ಮಾನಿಸಲಾಯಿತು. ಶ್ರೀ ಉಪೇಂದ್ರನ್ ಉಪಸ್ಥಿತರಿದ್ದರು. ಪಿ. ಮುರಳೀಧರನ್ ಸಮಾರೋಪ ಭಾಷಣ ಮಾಡಿದರು. ಗೀತಾ ಬಾಲಕೃಷ್ಣನ್ ಸ್ವಾಗತಿಸಿದರು. ಮಿನಿ ಶ್ರೀನಿವಾಸನ್ ವಂದಿಸಿದರು. ಕಾರ್ಯಖ್ರಮದ ಅಂಗವಗಿ ವೇದಿಕೆಯಲ್ಲಿ ಮಹಿಳೆಯರಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು.

