HEALTH TIPS

ಯುದ್ಧದ ಮೂಲಕ ಯಾವುದೇ ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಿಲ್ಲ: ಪ್ರಧಾನಿ ಮೋದಿ

ನವದೆಹಲಿ: ಪಶ್ಚಿಮ ಏಷ್ಯಾ ಮತ್ತು ಉಕ್ರೇನ್‌ ಸಂಘರ್ಷಗಳಿಗೆ "ತ್ವರಿತ ಅಂತ್ಯ" ಹಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಕರೆ ನೀಡಿದ್ದು, ಯಾವುದೇ ಸಮಸ್ಯೆಯನ್ನು ಸೇನಾ ಮುಖಾಮುಖಿಯ ಮೂಲಕ ಪರಿಹರಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಭಾರತ ಪ್ರವಾಸದಲ್ಲಿರುವ ಫಿನ್ಲೆಂಡ್ ಅಧ್ಯಕ್ಷ ಅಲೆಕ್ಸಾಂಡರ್ ಸ್ಟಬ್ ಅವರೊಂದಿಗೆ ಹೈದರಾಬಾದ್ ಹೌಸ್ ನಲ್ಲಿ ಸುದೀರ್ಘ ಮಾತುಕತೆ ನಡೆಸಿದ ನಂತರ ಪ್ರಧಾನಿ ಮೋದಿ ಈ ಹೇಳಿಕೆ ನೀಡಿದ್ದಾರೆ.

"ಭಾರತ ಮತ್ತು ಫಿನ್ಲ್ಯಾಂಡ್ ಎರಡೂ ರಾಷ್ಟ್ರಗಳು ಕಾನೂನು, ದ್ವಿಪಕ್ಷಿಯ ಮಾತುಕತೆ ಮತ್ತು ರಾಜತಾಂತ್ರಿಕತೆಯನ್ನು ನಂಬುತ್ತವೆ. ಯಾವುದೇ ಸಮಸ್ಯೆಯನ್ನು ಮಿಲಿಟರಿ ಸಂಘರ್ಷದಿಂದ ಪರಿಹರಿಸಲು ಸಾಧ್ಯವಿಲ್ಲ ಎಂಬುದನ್ನು ನಾವು ಒಪ್ಪುತ್ತೇವೆ" ಎಂದು ಅವರು ಹೇಳಿದರು.

"ಉಕ್ರೇನ್ ಆಗಿರಲಿ ಅಥವಾ ಪಶ್ಚಿಮ ಏಷ್ಯಾ ಆಗಿರಲಿ, ಸಂಘರ್ಷಗಳ ತ್ವರಿತ ಅಂತ್ಯ ಕಾಣಬೇಕು ಮತ್ತು ಶಾಂತಿಗಾಗಿ ಪ್ರತಿಯೊಂದು ಪ್ರಯತ್ನವನ್ನು ಬೆಂಬಲಿಸುವುದನ್ನು ನಾವು ಮುಂದುವರಿಸುತ್ತೇವೆ" ಎಂದು ಪ್ರಧಾನಿ ಮೋದಿ ತಮ್ಮ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾತುಕತೆ ವೇಳೆ, ಭಾರತ-ಫಿನ್ಲ್ಯಾಂಡ್ ಸಂಬಂಧವನ್ನು ಡಿಜಿಟಲೀಕರಣ ಮತ್ತು ಸುಸ್ಥಿರತೆ ಕ್ಷೇತ್ರದಲ್ಲಿ ವ್ಯೂಹಾತ್ಮಕ ಪಾಲುದಾರಿಕೆಗೆ ಏರಿಸಲು ಉಭಯ ನಾಯಕರು ಒಪ್ಪಿಕೊಂಡರು. "AI ನಿಂದ 6G ಟೆಲಿಕಾಂ, ಶುದ್ಧ ಇಂಧನದಿಂದ ಕ್ವಾಂಟಮ್ ಕಂಪ್ಯೂಟಿಂಗ್‌ವರೆಗಿನ ಈ ಪಾಲುದಾರಿಕೆಯು ಅನೇಕ ಹೈಟೆಕ್ ಕ್ಷೇತ್ರಗಳಲ್ಲಿ ನಮ್ಮ ಸಹಕಾರಕ್ಕೆ ವೇಗ ಮತ್ತು ಶಕ್ತಿಯನ್ನು ನೀಡುತ್ತದೆ" ಎಂದು ಅವರು ಹೇಳಿದರು.

ಭಾರತ ಮತ್ತು ಯುರೋಪಿಯನ್ ಯೂನಿಯನ್(ಇಯು) ನಡುವಿನ ಮುಕ್ತ ವ್ಯಾಪಾರ ಒಪ್ಪಂದವು ಉಭಯ ದೇಶಗಳ ನಡುವಿನ ವ್ಯಾಪಾರ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ಮೋದಿ ಹೇಳಿದರು.

"ಈ ಒಪ್ಪಂದವು ಭಾರತ ಮತ್ತು ಫಿನ್‌ಲ್ಯಾಂಡ್ ನಡುವಿನ ವ್ಯಾಪಾರ, ಹೂಡಿಕೆ ಮತ್ತು ತಂತ್ರಜ್ಞಾನ ಸಹಕಾರವನ್ನು ಮತ್ತಷ್ಟು ಬಲಪಡಿಸುತ್ತದೆ" ಎಂದು ಅವರು ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries