ತಿರುವನಂತಪುರಂ: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಕಾಲೇಜು ವಿದ್ಯಾರ್ಥಿನಿಯರಿಗೆ ಮಾಸಿಕ 1,000 ಸಹಾಯಧನ ಸೇರಿದಂತೆ ಹಲವು ಗ್ಯಾರಂಟಿ ಯೋಜನೆಗಳನ್ನು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಶನಿವಾರ ಘೋಷಣೆ ಮಾಡಿದರು. ಕೆಲವೇ ತಿಂಗಳಲ್ಲಿ ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.
ವಿಧಾನಸಭೆ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಸನ್ ಅವರು ರಾಜ್ಯವ್ಯಾಪಿ ನಡೆಸಿದ್ದ ' ನವಯುವ' (ಪುದುಯುಗ) ಯಾತ್ರೆ'ಯ ಸಮಾರೋಪ ಸಮಾರಂಭದಲ್ಲಿ ರಾಹುಲ್ ಭಾಗವಹಿಸಿ ಮಾತನಾಡಿದರು. 'ಕಾಂಗ್ರೆಸ್ ನೇತೃತ್ವದ ಯುಡಿಎಫ್ ಕೂಟದ ಗೆಲುವಿಗಾಗಿ ಪಕ್ಷದ ಎಲ್ಲ ಕಾರ್ಯಕರ್ತರು ಒಗ್ಗಟ್ಟಾಗಿ ಕೆಲಸ ಮಾಡಬೇಕು' ಎಂದು ಕಿವಿಮಾತು ಹೇಳಿದರು.
ಟಿ-20 ವಿಶ್ವಕಪ್ನಲ್ಲಿ ಇತ್ತೀಚೆಗೆ ಉತ್ತಮ ಪ್ರದರ್ಶನ ನೀಡಿದ ತಿರುವನಂತಪುರದ ಸಂಜು ಸ್ಯಾಮ್ಸನ್ ಅವರಿಗೆ ರಾಹುಲ್ ಶುಭಾಶಯ ಕೋರಿದರು.

