HEALTH TIPS

ಗ್ರಾಮೀಣ ಜನರಿಗೆ ವ್ಯಕ್ತಿತ್ವ ವಿಕಸನ, ಭಾಷಾ ತರಬೇತಿ ನೀಡುವುದು ಅಗತ್ಯವಾಗಿದೆ: ಸುಧಾ ಮೂರ್ತಿ

 ನವದೆಹಲಿ: ದೇಶದ ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಜನರಿಗೆ ವ್ಯಕ್ತಿತ್ವ ವಿಕಸನ ಮತ್ತು ಭಾಷಾ ತರಬೇತಿ ಒದಗಿಸುವುದು ಪ್ರಮುಖವಾಗಿದೆ ಎಂದು ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ ಮಂಗಳವಾರ ಸಲಹೆ ನೀಡಿದ್ದಾರೆ.


ರಾಜ್ಯಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಕಾರ್ಯವೈಖರಿ ಕುರಿತ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಗ್ರಾಮಗಳು ಅಭಿವೃದ್ಧಿಯಾಗದ ಹೊರತು ದೇಶ ಪ್ರಗತಿಯಾಗುವುದಿಲ್ಲ. ಹಳ್ಳಿಗಳಲ್ಲಿನ ಗ್ರಾಮೀಣ ಜನರಿಗೆ ಕೌಶಲ್ಯ ನೀಡುವಲ್ಲಿ ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ. ಆದರೆ, ಅವರಿಗೆ ತಾಂತ್ರಿಕವಾಗಿ ಕೌಶಲ ನೀಡುವುದರ ಜೊತೆಗೆ ವ್ಯಕ್ತಿತ್ವ ವಿಕಸನ ಮತ್ತು ಭಾಷಾ ತರಬೇತಿ ಒದಗಿಸುವ ಮೂಲಕ ಅವರ ಆತ್ಮವಿಶ್ವಾಸವನ್ನು ಹೆಚ್ಚಿಸುವುದು ಅಷ್ಟೇ ಮುಖ್ಯವಾಗಿದೆ ಎಂದು ಮೂರ್ತಿ ಹೇಳಿದರು.

ವಿದ್ಯುತ್ ಅನ್ನು ಸುಸ್ಥಿರವಾಗಿ ಬಳಸಿಕೊಳ್ಳುವ, ಕೃಷಿ ಮತ್ತು ಇತರ ತ್ಯಾಜ್ಯವನ್ನು ಮರುಬಳಕೆ ಮಾಡುವ ಮತ್ತು ಹವಾಮಾನಕ್ಕೆ ಅನುಗುಣವಾಗಿ ರಸ್ತೆ, ವಸತಿ ಮತ್ತಿತರ ಮೂಲಸೌಕರ್ಯಗಳನ್ನು ಒದಗಿಸುವುದು ಕೂಡಾ ಮುಖ್ಯವಾಗಿದೆ ಎಂದರು.







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries