ನವದೆಹಲಿ: ಇರಾನ್ ಮೇಲೆ ದಾಳಿ ಮಾಡಿದ ಇಸ್ರೇಲ್ ಮತ್ತು ಅಮೆರಿಕ ದೇಶಗಳು ತಮ್ಮ ಸರ್ವೋಚ್ಛ ನಾಯಕ ಆಯತೊಲ್ಲ ಖಮೇನಿ ಹತ್ಯೆ ವಿಚಾರವಾಗಿ ಮೌನವಾಗಿರದಂತೆ ಇರಾನ್ ಭಾರತಕ್ಕೆ ಆಗ್ರಹಿಸಿದೆ.
ಇರಾನ್ ಮೇಲಿನ ಅಮೆರಿಕ-ಇಸ್ರೇಲ್ ದಾಳಿ ಮತ್ತು ಅದರ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿಯವರ ಹತ್ಯೆಯನ್ನು ಬಲವಾಗಿ ಖಂಡಿಸುವಂತೆ ಭಾರತದಲ್ಲಿರುವ ಇರಾನ್ ರಾಯಭಾರ ಕಚೇರಿ ಭಾನುವಾರ ವಿಶ್ವದಾದ್ಯಂತ ಸರ್ಕಾರಗಳನ್ನು ಒತ್ತಾಯಿಸಿದೆ.
ಒಂದು ಹೇಳಿಕೆಯಲ್ಲಿ, ಖಮೇನಿಯವರ ಸಾವಿನ ಬಗ್ಗೆ ರಾಯಭಾರ ಕಚೇರಿ ತನ್ನ "ತೀವ್ರ ದುಃಖ" ವ್ಯಕ್ತಪಡಿಸಿದೆ.
ಅಂತೆಯೇ ಇರಾನಿನ ಕ್ರಾಂತಿಕಾರಿ ಗಾರ್ಡ್ ಕಾರ್ಪ್ಸ್ ಸೇಡು ತೀರಿಸಿಕೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದು, ಮಧ್ಯಪ್ರಾಚ್ಯದಲ್ಲಿರುವ ಅಮೆರಿಕದ ನೆಲೆಗಳ ಮೇಲೆ ಈಗಾಗಲೇ ಪ್ರತೀಕಾರದ ದಾಳಿಗಳನ್ನು ನಡೆಸಿದೆ ಎಂದು ಹೇಳಿದೆ. ಇರಾನಿನ ಸರ್ಕಾರಿ ಸ್ವಾಮ್ಯದ ಮಾಧ್ಯಮವು ಇಸ್ರೇಲ್ ಮತ್ತು ಯುಎಸ್ ನಡೆಸಿದ ದಾಳಿಯಲ್ಲಿ ಖಮೇನಿ ಸಾವನ್ನಪ್ಪಿದ್ದಾರೆ ಎಂದು ಭಾನುವಾರ ಮುಂಜಾನೆ ದೃಢಪಡಿಸಿದೆ.

