ತಿರುವನಂತಪುರಂ: ಇಂದಿನಿಂದ ಮೊದಲ್ಗೊಂಡು ಬುಧವಾರದ (ಏಪ್ರಿಲ್ 15) ವರೆಗೆ ಕೇರಳದಲ್ಲಿ ಹೆಚ್ಚಿನ ತಾಪಮಾನ ಎಚ್ಚರಿಕೆ ನೀಡಲಾಗಿದೆ. ಕೇಂದ್ರ ಹವಾಮಾನ ಇಲಾಖೆ ವಿವಿಧ ಜಿಲ್ಲೆಗಳಲ್ಲಿ ಹಳದಿ ಎಚ್ಚರಿಕೆ ನೀಡಿದೆ. ಪಾಲಕ್ಕಾಡ್ ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 40°C ತಲುಪುವ ಸಾಧ್ಯತೆಯಿದೆ ಮತ್ತು ಕೊಲ್ಲಂ ಜಿಲ್ಲೆಯಲ್ಲಿ ಇದು 39 ಡಿಗ್ರಿ ಸೆ. ತಲುಪುವ ಸಾಧ್ಯತೆಯಿದೆ.
ಪತ್ತನಂತಿಟ್ಟ, ಆಲಪ್ಪುಳ, ಕೊಟ್ಟಾಯಂ, ಎರ್ನಾಕುಳಂ, ತ್ರಿಶೂರ್, ಕೋಝಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿ ಸೆ. ತಲುಪುವ ಸಾಧ್ಯತೆಯಿದೆ. ತಿರುವನಂತಪುರಂ ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆ.ತಲುಪುವ ಸಾಧ್ಯತೆಯಿದೆ (ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಹೆಚ್ಚು) ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ.
ಹೆಚ್ಚಿನ ತಾಪಮಾನ ಮತ್ತು ಆದ್ರ್ರ ಗಾಳಿಯಿಂದಾಗಿ, ಗುಡ್ಡಗಾಡು ಪ್ರದೇಶಗಳನ್ನು ಹೊರತುಪಡಿಸಿ ಈ ಜಿಲ್ಲೆಗಳು ಇಂದಿನಿಂದ ಏಪ್ರಿಲ್ 15 ರವರೆಗೆ ಬಿಸಿ ಮತ್ತು ಅನಾನುಕೂಲ ವಾತಾವರಣವನ್ನು ಅನುಭವಿಸುವ ಸಾಧ್ಯತೆಯಿದೆ.

