HEALTH TIPS

ʼಉದ್ಯೋಗವಿಲ್ಲದೆ ತವರು ರಾಜ್ಯಗಳಿಗೆ ಮರಳುತ್ತಿರುವ ಕಾರ್ಮಿಕರುʼ; ಸೂರತ್ ರೈಲ್ವೆ ನಿಲ್ದಾಣದಲ್ಲಿ ಜನದಟ್ಟಣೆ, ನೂಕು ನುಗ್ಗಲು

 ಸೂರತ್: ಮಧ್ಯಪ್ರಾಚ್ಯ ಸಂಘರ್ಷ ಮತ್ತು ಎಲ್‌ಪಿಜಿ ಬಿಕ್ಕಟ್ಟು ಭಾರತದಲ್ಲಿ ಉದ್ಯಮಗಳ ಮೇಲೆ ಪರಿಣಾಮ ಬೀರಿದೆ. ಕೈಗಾರಿಕೆಗಳು ಅಸ್ತವ್ಯಸ್ತಗೊಂಡಿದೆ. ಅನೇಕ ಕಾರ್ಮಿಕರು ಉದ್ಯೋಗವಿಲ್ಲದೆ ತಮ್ಮ ತವರು ರಾಜ್ಯಗಳಿಗೆ ಮರಳುತ್ತಿದ್ದಾರೆ.


ರವಿವಾರ ಸೂರತ್‌ನ ಉಧ್ನಾ ರೈಲು ನಿಲ್ದಾಣದಲ್ಲಿ ಸಾವಿರಾರು ವಲಸೆ ಕಾರ್ಮಿಕರು ಜಮಾಯಿಸಿದ್ದರು.

ಅವರು ಉತ್ತರ ಪ್ರದೇಶ ಮತ್ತು ಬಿಹಾರಕ್ಕೆ ಹೋಗುವ ರೈಲುಗಳನ್ನು ಹತ್ತಲು ಪ್ರಯತ್ನಿಸಿದಾಗ ನೂಕುನುಗ್ಗಲು ಉಂಟಾಗಿ ಪರಿಸ್ಥಿತಿ ನಿಯಂತ್ರಣ ತಪ್ಪಿದೆ. ಜನರನ್ನು ಚದುರಿಸಲು ಪೊಲೀಸರು ಈ ವೇಳೆ ಲಾಠೀ ಚಾರ್ಜ್ ಮಾಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿರುವ ವೀಡಿಯೊಗಳಲ್ಲಿ ಪೊಲೀಸರು ಲಾಠೀ ಚಾರ್ಜ್‌ ಮಾಡುತ್ತಿರುವುದು, ನೂಕು ನುಗ್ಗಲಿನ ಮಧ್ಯೆ ಪ್ರಯಾಣಿಕರು ತಪ್ಪಿಸಿಕೊಳ್ಳಲು ಹರಸಾಹಸ ಪಡುತ್ತಿರುವುದು ಕಂಡು ಬಂದಿದೆ.

ರವಿವಾರ ಬೆಳಿಗ್ಗೆ 11:30 ರ ಸುಮಾರಿಗೆ ಕೆಲವು ಪ್ರಯಾಣಿಕರು ಬಿಹಾರಕ್ಕೆ ತೆರಳುವ ರೈಲು ಹತ್ತಲು ಯತ್ನಿಸಿದಾಗ ಈ ನೂಕುನುಗ್ಗಲು ಉಂಟಾಗಿದೆ. ಈ ವೇಳೆ ಮಧ್ಯಪ್ರವೇಶಿಸಿದ ಪೊಲೀಸರು ಮತ್ತು ರೈಲ್ವೆ ರಕ್ಷಣಾ ಪಡೆ ಸಿಬ್ಬಂದಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ರೈಲ್ವೆ ಅಧಿಕಾರಿ ಅನುಭವ್ ಸಕ್ಸೇನಾ, ಮಧ್ಯಾಹ್ನದ ವೇಳೆಗೆ ಆರು ರೈಲುಗಳಲ್ಲಿ ಸುಮಾರು 21,000 ಕ್ಕೂ ಹೆಚ್ಚು ಪ್ರಯಾಣಿಕರು ಉಧ್ನಾದಿಂದ ತೆರಳಿದ್ದಾರೆ. ಹೆಚ್ಚಿನ ಜನಸಂದಣಿಯನ್ನು ನಿಯಂತ್ರಿಸುವುದು ಕಷ್ಟಕರವಾಗಿತ್ತು. ಪದೇ ಪದೇ ಎಚ್ಚರಿಕೆಗಳ ಹೊರತಾಗಿಯೂ, ಪರಿಸ್ಥಿತಿ ಹದಗೆಟ್ಟಿತ್ತು. ಅಧಿಕಾರಿಗಳು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕಾಯಿತು ಎಂದು ಹೇಳಿದ್ದಾರೆ. 








ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries