HEALTH TIPS

ವೀರಮಲೆ ಬೆಟ್ಟ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ- ನಿರ್ಮಾಣ ಕಾರ್ಯ ಶೀಘ್ರ ಪೂರ್ಣಗೊಳಿಸಲು ಸೂಚನೆ

ಕಾಸರಗೋಡು: ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾರ್ಯ ನಡೆಯುತ್ತಿರುವ ಚೆರುವತ್ತೂರು ವೀರಮಲೆ ಬೆಟ್ಟದಲ್ಲಿ ಈ ಹಿಂದೆ ಮಳೆಗಾಲದಲ್ಲಿ ಉಂಟಾಗಿದ್ದ  ಭಾರೀ ಭೂಕುಸಿತದಿಂದ ಸಮಸ್ಯೆ ಎದುರಾಗಿದ್ದು, ಭವಿಷ್ಯದಲ್ಲಿ ಇಂತಹ ಸಮಸ್ಯೆ ಉಂಟಾಗದಂತೆ ತಕ್ಷಣ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.  ತೀವ್ರ ಭೂಕುಸಿತ ಸಂಭವಿಸಿದ ಚೆರುವತ್ತೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾರ್ಯ ನಡೆಯುವ ಪ್ರದೇಶಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಕಾಂಗಾರಿಯ ಅವಲೋಕನ ನಡೆಸಿದರು.  


ವೀರಮಲಬೆಟ್ಟದಲ್ಲಿನ ಕಾಮಗಾರಿಯನ್ನು ಮಳೆಗಾಲಕ್ಕೆ ಮುಂಚಿತವಾಗಿ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಸಂಬಂಧಪಟ್ಟವರಿಗೆ ನಿರ್ದೇಶನ ನೀಡಿದರು.  ಹೆಚ್ಚಿನ ಯಂತ್ರೋಪಕರಣಗಳನ್ನು ತರುವ ಮೂಲಕ ಕಾಮಗಾರಿಯನ್ನು ತ್ವರಿತಗೊಳಿಸಬೇಕು.  ಸಮುದಾಯ ಅರಣ್ಯ ವಿಭಾಗದ ಭಾಗವಾಗಿರುವ ವೀರಮಲಕ್ಕುನ್ನುವಿನ ಮೇಲ್ಭಾಗಕ್ಕೂ ಜಿಲ್ಲಾಧಿಕಾರಿ ಭೇಟಿ ನೀಡಿದರು. ವೀರಮಲಕ್ಕುನ್ನುವಿನಲ್ಲಿ ಜಿಲ್ಲಾ ಪ್ರವಾಸೋದ್ಯಮ ಪ್ರಚಾರ ಮಂಡಳಿ ಮತ್ತು ಸಾಮಾಜಿಕ ಅರಣ್ಯ ಇಲಾಖೆ ನಡೆಸುತ್ತಿರುವ ಪ್ರವಾಸೋದ್ಯಮ ಯೋಜನೆಯ ಪ್ರಗತಿಯನ್ನು ಜಿಲ್ಲಾಧಿಕಾರಿ ಪರಿಶೀಲಿಸಿದರು.

ನಿರ್ಮಾಣ ಕಾರ್ಯವನ್ನು ತ್ವರಿತಗೊಳಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಉಮೇಶ್ ಗರ್ಹ್ ಅವರಿಗೆ ಜಿಲ್ಲಾಧಿಕಾರಿ ಸೂಚಿಸಿದರು. ಎಲ್‍ಎ ಉಪ ಜಿಲ್ಲಾಧಿಕಾರಿ ಲಿಪು ಎಸ್. ಲಾರೆನ್ಸ್, ಹೊಸದುರ್ಗ ತಹಶೀಲ್ದಾರ್ ಪ್ರೇಮ್‍ರಾಜ್ ಎಲ್‍ಎಎನ್‍ಎಚ್ ತಹಶೀಲ್ದಾರ್ ಶಶಿಧರನ್, ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಂಪನಿಯ ಸ್ಥಳೀಯ ಎಂಜಿನಿಯರ್‍ಗಳು, ಅರಣ್ಯ ಇಲಾಖೆಯ ರೇಂಜ್ ಫಾರೆಸ್ಟ್ ಅಧಿಕಾರಿಗಳು  ಉಪಸ್ಥಿತರಿದ್ದರು. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries