HEALTH TIPS

ಇದೇ ಮೊದಲ ಬಾರಿಗೆ ರಾಜ್ಯಸಭೆಗೆ ಸಲಿಂಗಿ ಎಂಟ್ರಿ!

ನವದೆಹಲಿ: ಎನ್‌ಸಿಪಿ ನಾಯಕ ಶರದ್ ಪವಾರ್‌, ಕೇಂದ್ರ ಸಚಿವ ರಾಮದಾಸ್‌ ಅಠಾವಳೆ, ಸದನಕ್ಕೆ ಆಯ್ಕೆಯಾದ ಮೊದಲ ತೃತೀಯ ಲಿಂಗಿ ಮನೇಕಾ ಗುರುಸ್ವಾಮಿ ಸೇರಿದಂತೆ 19 ಮಂದಿ ಸೋಮವಾರ ರಾಜ್ಯಸಬಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಉಪ ರಾಷ್ಟ್ರಪತಿಯೂ ಆದ ರಾಜ್ಯಸಭೆ ಸಭಾಪತಿ ಸಿ.ಪಿ. ರಾಧಾಕೃಷ್ಣನ್‌ ಸಮ್ಮುಖದಲ್ಲಿ ನಾಯಕರು ಶಪಥ ಸ್ವೀಕರಿಸಿದರು. ಈ ವೇಳೆ ಉಪ ಸಭಾಪತಿ ಹರಿವಂಶ್‌, ಕೇಂದ್ರ ಸಚಿವ ಕಿರಣ್‌ ರಿಜಿಜು, ವಿವಿಧ ಪಕ್ಷಗಳ ನಾಯಕರು ಉಪಸ್ಥಿತರಿದ್ದರು.

ಮಹಾರಾಷ್ಟ್ರದ ಐವರು, ತಮಿಳುನಾಡಿನಿಂದ ಆರು, ಪಶ್ಚಿಮ ಬಂಗಾಳದಿಂದ ಐವರು ಮತ್ತು ಒಡಿಶಾದಿಂದ ಮೂವರು ಶಪಥ ಸ್ವೀಕರಿಸಿದರು. ಬಹುತೇಕರು ತಮ್ಮ ಪ್ರಾದೇಶಿಕ ಭಾಷೆಯಲ್ಲಿಯೇ ಶಪಥ ಮಾಡಿದ್ದು ಗಮನಾರ್ಹವಾಗಿತ್ತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries