ಭುವನಗಿರಿ: ತೆಲಂಗಾಣದ ಭುವನಗಿರಿ ಜಿಲ್ಲೆಯಲ್ಲಿ ಚಾರ್ಮಿನಾರ್ ಎಕ್ಸ್ಪ್ರೆಸ್ ರೈಲಿನ ಬೋಗಿಯೊಂದರ ಚಕ್ರದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ರೈಲನ್ನು ತುರ್ತಾಗಿ ನಿಲ್ಲಿಸಿದ ಘಟನೆ ನಡೆದಿದೆ.
ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಅಥವಾ ಅಪಾಯ ಸಂಭವಿಸಿಲ್ಲ ಎಂದು ದಕ್ಷಿಣ ಮಧ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಹೈದರಾಬಾದ್ನಿಂದ ತಮಿಳುನಾಡಿನ ತಾಂಬರಂಗೆ ತೆರಳುತ್ತಿದ್ದ ಚಾರ್ಮಿನಾರ್ ಎಕ್ಸ್ಪ್ರೆಸ್ (ರೈಲು ಸಂಖ್ಯೆ 12760) ಸಿಕಂದರಾಬಾದ್ ವಿಭಾಗದ ಆಲೇರು ರೈಲ್ವೆ ನಿಲ್ದಾಣ ತಲುಪಿದಾಗ ಈ ತಾಂತ್ರಿಕ ದೋಷ ಪತ್ತೆಯಾಗಿದೆ.
ರೈಲಿನ ಚಕ್ರದಲ್ಲಿ 'ಬ್ರೇಕ್ ಬೈಂಡಿಂಗ್' ಸಮಸ್ಯೆಯಿಂದ ಘರ್ಷಣೆ ಉಂಟಾಗಿ ಹೊಗೆ ಮತ್ತು ಬೆಂಕಿ ಕಾಣಿಸಿಕೊಂಡಿತು. ತಕ್ಷಣ ಸಿಬ್ಬಂದಿ ರೈಲನ್ನು ನಿಲ್ಲಿಸಿ ಅಗ್ನಿಶಾಮಕ ಉಪಕರಣಗಳ ಮೂಲಕ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ದಕ್ಷಿಣ ಮಧ್ಯ ರೈಲ್ವೆ, ಬ್ರೇಕ್ ಬೈಂಡಿಂಗ್ನಿಂದಾಗಿ ಈ ಸಣ್ಣ ಅವಘಡ ಸಂಭವಿಸಿದೆ. ಘಟನೆಯಲ್ಲಿ ಯಾವುದೇ ಆಸ್ತಿ ಪಾಸ್ತಿ ನಷ್ಟ ಅಥವಾ ಯಾರಿಗೂ ಗಾಯಗಳಾಗಿಲ್ಲ. ಪ್ರಯಾಣಿಕರು ಸುರಕ್ಷಿತವಾಗಿದ್ದು, ರೈಲು ತನ್ನ ಮುಂದಿನ ಪ್ರಯಾಣ ಬೆಳೆಸಿತು ಎಂದು ಅದು ತಿಳಿಸಿದೆ.

