ತಿರುವನಂತಪುರಂ: ಮಹಾರಾಷ್ಟ್ರದ ಉಮರ್ ಖಾಡ್ನಲ್ಲಿ ಕೇರಳದಿಂದ ಮಧ್ಯಪ್ರದೇಶಕ್ಕೆ ಸರಕುಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ತಡೆದು ಚಾಲಕನ ಮೇಲೆ ಗ್ಯಾಂಗ್ ದಾಳಿ ಮಾಡಿದ ಘಟನೆಯಲ್ಲಿ ಬಲವಾದ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ ಪತ್ರ ಬರೆದಿದ್ದಾರೆ.
ದೇಶ ಮತ್ತು ರಾಜ್ಯದ ಹೆದ್ದಾರಿಗಳಲ್ಲಿ ಸಶಸ್ತ್ರ ಗ್ಯಾಂಗ್ಗಳು ಮುಕ್ತವಾಗಿ ಸುತ್ತಾಡುತ್ತಿರುವುದು, ಕಾನೂನನ್ನು ಧಿಕ್ಕರಿಸುತ್ತಿರುವುದು ಮತ್ತು ರಸ್ತೆ ಬದಿಗಳಲ್ಲಿ ಇಂತಹ ಹಿಂಸಾಚಾರವನ್ನು ಬಿಚ್ಚಿಡುತ್ತಿರುವುದು ತುಂಬಾ ಕಳವಳಕಾರಿಯಾಗಿದೆ.
ದೇಶದ ಆರ್ಥಿಕತೆಯ ಪ್ರಮುಖ ಭಾಗವಾಗಿರುವ ಅಂತರರಾಜ್ಯ ಸರಕು ಸಾಗಣೆ ವಲಯದಲ್ಲಿ ಕೆಲಸ ಮಾಡುವ ಕಾರ್ಮಿಕರು ಇಂತಹ ಯೋಜಿತ ದಾಳಿಗಳಿಗೆ ನಿರಂತರವಾಗಿ ಬಲಿಯಾಗುತ್ತಿದ್ದಾರೆ.
ಆದ್ದರಿಂದ, ಕೇಂದ್ರ ಗೃಹ ಸಚಿವಾಲಯ ತಕ್ಷಣ ಮಧ್ಯಪ್ರವೇಶಿಸಿ ಮಹಾರಾಷ್ಟ್ರ ಪೆÇಲೀಸರ ಸಹಯೋಗದೊಂದಿಗೆ ತನಿಖೆ ನಡೆಸಿ, ಅಪರಾಧಿಗಳನ್ನು ಬಂಧಿಸಿ ಬಲವಾದ ಕಾನೂನು ಕ್ರಮ ಕೈಗೊಳ್ಳಬೇಕು. ಹಿಂಸಾಚಾರದಲ್ಲಿ ಗಂಭೀರವಾಗಿ ಗಾಯಗೊಂಡ ಲಾರಿಯ ನೌಕರರಿಗೆ ಸಮಗ್ರ ವೈದ್ಯಕೀಯ ಚಿಕಿತ್ಸೆ ಮತ್ತು ಆರ್ಥಿಕ ನೆರವು ನೀಡಬೇಕೆಂದು ಕೆ.ಸಿ.ವೇಣುಗೋಪಾಲ್ ಪತ್ರದಲ್ಲಿ ಒತ್ತಾಯಿಸಿದ್ದಾರೆ.

