ಕಾಸರಗೋಡು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಚಂದ್ರಗಿರಿ ವಲಯದ ಅರವತ್ ಮಟ್ಟೆಂಗಾಣ ಕಯಗಂ ಪೂ ಬಾಣಂಗುಯೀ ಕ್ಷೇತ್ರಕ್ಕೆ ಧರ್ಮಸ್ಥಳದಿಂದ ಪೂಜ್ಯರು ಮಂಜೂರು ಮಾಡಿದ 3 ಲಕ್ಷ ರೂ. ಧನಸಹಾಯವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ಬಾಬು ನಾಯಕ್, ಜನಜಾಗೃತಿ ವೇದಿಕೆಯ ಯೋಜನಾಧಿಕಾರಿ ಗಣೇಶ ಆಚಾರ್ಯ ಮಾನ್ಯ, ಯೋಜನಾಧಿಕಾರಿಗಳಾದ ದಿನೇಶ್ ಅವರು ದೇವಸ್ಥಾನದ ಆಡಳಿತ ಸಮಿತಿಗೆ ಹಸ್ತಾಂತರಿಸಿದರು. ಕ್ಷೇತ್ರದಲ್ಲಿ ನಡೆದ ಸಭೆಯ ಅಧ್ಯಕ್ಷತೆಯನ್ನು ಆಡಳಿತ ಸಮಿತಿಯ ಅಧ್ಯಕ್ಷ ಶಿವರಾಮನ್ ವಹಿಸಿದ್ದರು. ಈ ಸಂದರ್ಭದಲ್ಲಿ ಜನ ಜಾಗೃತಿ ವೇದಿಕೆ ವಲಯದ ಅಧ್ಯಕ್ಷ ಚಂದ್ರನ್, ಸಮಾಜ ಕಾರ್ಯಕರ್ತ ಮೋಹನ್, ಒಕ್ಕೂಟದ ವಲಯ ಅಧ್ಯಕ್ಷ ಸುಪ್ರಿಯ, ಹಾಗೂ ವಲಯ ಮೇಲ್ವಿಚಾರಕಿ ಚಂದ್ರಕಲಾ, ಸೇವಾ ಪ್ರತಿನಿಧಿಗಳಾದ ಸರೋಜಾ, ಶೋಭಾ, ಒಕ್ಕೂಟದ ಅಧ್ಯಕ್ಷರುಗಳು, ಪದಾಧಿಕಾರಿಗಳು, ಸದಸ್ಯರು, ಊರಿನ ಗಣ್ಯರು, ಆಡಳಿತ ಸಮಿತಿ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

.jpg)
