ಮಯೂರೇಶ್ವರ: ಪಶ್ಚಿಮ ಬಂಗಾಳದ ಜನರು ಬಾಂಬ್ಗಳಿಗೆ ತಮ್ಮ ಮತದ ಮೂಲಕ ಉತ್ತರಿಸಲಿದ್ದಾರೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಸೋಮವಾರ(ಏ.13) ಹೇಳಿದ್ದಾರೆ.
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಬಿರ್ಭೂಮ್ ಜಿಲ್ಲೆಯ ಮಯೂರೇಶ್ವರದಲ್ಲಿ ಅವರು ಪ್ರಚಾರದಲ್ಲಿ ಭಾಗವಹಿಸಿದ್ದರು.
ರಾಜ್ಯದ ಬಹುಸಂಖ್ಯಾತರನ್ನು ಭಯಭೀತರನ್ನಾಗಿಸುವ ಕೆಲಸವನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಬಾರಿಯ ಚುನಾವಣೆಯಲ್ಲಿ ಮತದಾರರು ಬಿಜೆಪಿಗೆ ಮತ ಹಾಕುವ ಮೂಲಕ ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರವನ್ನು ರಚಿಸಲಿದ್ದೇವೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.
ದೇಶ ಮತ್ತು ರಾಜ್ಯದಲ್ಲಿರುವ ಅಕ್ರಮ ನುಸುಳುಕೋರರನ್ನು ಹೊರದಬ್ಬಲು ಈ ಚುನಾವಣೆ ನಡೆಯುತ್ತಿದೆ. ಮತದಾನದ ದಿನ ಟಿಎಂಸಿಯ ಗೂಂಡಾಗಳು ಮನೆಯೊಳಗೆ ಇರಬೇಕು, ಇಲ್ಲದಿದ್ದರೆ ಮೇ.4ರ ನಂತರ ಅವರನ್ನು ಜೈಲಿಗಟ್ಟಲಾಗುತ್ತದೆ ಎಂದು ಹೇಳಿದ್ದಾರೆ.

