ಮುಂಬೈ: ಆಮ್ ಆದ್ಮಿ ಪಕ್ಷ(ಎಎಪಿ) "ಸರಿಯಾದ" ಮಾರ್ಗವನ್ನು ಅನುಸರಿಸಿದ್ದರೆ, ರಾಘವ್ ಛಡ್ಡಾ ಮತ್ತು ಇತರ ಆರು ರಾಜ್ಯಸಭಾ ಸದಸ್ಯರು ಪಕ್ಷವನ್ನು ತ್ಯಜಿಸುತ್ತಿರಲಿಲ್ಲ ಎಂದು ಹಿರಿಯ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರು ಶುಕ್ರವಾರ ಹೇಳಿದ್ದಾರೆ.
"ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಅಭಿಪ್ರಾಯ ಹೊಂದುವ ಹಕ್ಕಿದೆ. ಅವರು(ಚಡ್ಡಾ ಮತ್ತು ಇತರರು) ಕೆಲವು ತೊಂದರೆಗಳನ್ನು ಎದುರಿಸಿರಬೇಕು. ಅದಕ್ಕಾಗಿಯೇ ಅವರು ಎಎಪಿ ತೊರೆದರು" ಎಂದು ಹಜಾರೆ ಮಹಾರಾಷ್ಟ್ರದ ಅಹಲ್ಯಾನಗರ ಜಿಲ್ಲೆಯಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಇದಕ್ಕೂ ಮೊದಲು, ದೆಹಲಿಯಲ್ಲಿ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಎಎಪಿ ರಾಜ್ಯಸಭಾ ಸದಸ್ಯರಾದ ರಾಘವ್ ಚಡ್ಡಾ ಮತ್ತು ಸಂದೀಪ್ ಪಾಠಕ್, ಅರವಿಂದ್ ಕೇಜ್ರಿವಾಲ್ ನೇತೃತ್ವದ ಪಕ್ಷ ತೊರೆದು, ಬಿಜೆಪಿಗೆ ಸೇರುವುದಾಗಿ ಘೋಷಿಸಿದರು.

