ಕಾಸರಗೋಡು: ಅಮೈ ಶ್ರೀ ಕೃಷ್ಣ ಭಜನಾ ಮಂದಿರದ ರಜತ ಮಹೋತ್ಸವದ ಮೊದಲ ದಿನದ ಧಾರ್ಮಿಕ ಸಭೆಯನ್ನು ಜಗದ್ಗುರು ಶಂಕರಾಚಾರ್ಯ ಪೀಠ ಶ್ರೀ ಮದೆಡನೀರು ಮಠಾಧೀಶ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಉದ್ಘಾಟಿಸಿ ಆಶೀರ್ವಚನ ನೀಡಿದರು.
ಈ ಸಂದರ್ಭ ಪರಮಪೂಜ್ಯ ತಂತ್ರಿವರ್ಯ ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಅಸ್ರ ಅನುಗ್ರಹ ಭಾಷಣ ಮಾಡಿದರು. ಕೇರಳ ರಾಜ್ಯ ಹಿಂದೂ ಐಕ್ಯವೇದಿ ಕಾರ್ಯಾಧ್ಯಕ್ಷ ವಲ್ಸನ್ ತಿಲ್ಲಂಗೇರಿ ಧಾರ್ಮಿಕ ಭಾಷಣ ಮಾಡಿದರು. ರಜತ ಮಹೋತ್ಸವ ಸಮಿತಿ ಅಧ್ಯಕ್ಷ ಶ್ರೀ ಕೆ.ಸದಾಶಿವ ಮಲ್ಯ ವಹಿಸಿದ್ದರು. ರಜತ ಮಹೋತ್ಸವ ವೈದಿಕ ಸಮಿತಿ ಅಧ್ಯಕ್ಷ ಡಾ. ಕೆ.ಎನ್.ವೆಂಕಟ್ರಮಣ ಹೊಳ್ಳ, ರಜತ ಮಹೋತ್ಸವದ ಗೌರವಾಧ್ಯಕ್ಷ ಜಗನ್ನಾಥ್ ವಿಟ್ಲ, ರಜತ ಮಹೋತ್ಸವ ಮಹಿಳಾ ಸಮಿತಿ ಅಧ್ಯಕ್ಷೆ ಶ್ರೀಲತಾ ಟೀಚರ್ ಎಸ್.ವಿ.ಟಿ ಉಪಸ್ಥಿತರಿದ್ದರು. ಆರುಶ್, ಆರಾದ್ಯ, ಆರುಹಿ, ಶ್ರೀನಂದು ಮಕ್ಕಳು ಪ್ರಾರ್ಥನೆ ಹಾಡಿದರು. ರಜತ ಮಹೋತ್ಸವದ ಪ್ರಧಾನ ಕಾರ್ಯದರ್ಶಿ ಗುಣಪಾಲ ಅಮೈ ಸ್ವಾಗತಿಸಿದರು. ಸಾಂಸ್ಕøತಿಕ ಸಮಿತಿ ಸಂಚಾಲಕ ರಾಜೇಶ್ ಅಮೈ ಕಾರ್ಯಕ್ರಮ ನಿರೂಪಿಸಿದರು. ಮಂದಿರದ ಕಾರ್ಯದರ್ಶಿ ರಾಮಚಂದ್ರ ಅಮೈ ವಂದಿಸಿದರು.



