ವಯನಾಡ್: ವಯನಾಡ್ ಮಾನಂದವಾಡಿ ಚೆರುಕಟ್ಟೂರಿನಲ್ಲಿ ಮತಗಟ್ಟೆ ಅಧಿಕಾರಿಯನ್ನು ವರ್ಗಾವಣೆ ಮಾಡಲಾಗಿದೆ. ಕಮಲದ ಚಿಹ್ನೆಗೆ ಮತ ಚಲಾಯಿಸುವಂತೆ ಮತದಾರರನ್ನು ಮನವೊಲಿಸಲಾಗಿದೆ ಎಂಬ ದೂರಿನ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.
ಮತದಾನದ ಆರಂಭದಲ್ಲಿ ಕೆಲವೆಡೆ ಮತ ಯಂತ್ರಗಳು ಅಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದ್ದರೂ, ದೀರ್ಘಕಾಲದವರೆಗೆ ಮತದಾನಕ್ಕೆ ಅಡ್ಡಿಪಡಿಸಿದ ಪರಿಸ್ಥಿತಿ ಇದ್ದಿರಲಿಲ್ಲ. ಇಲ್ಲಿಯವರೆಗೆ ಯಾವುದೇ ಪ್ರಮುಖ ಹಿಂಸಾಚಾರ ಘಟನೆಗಳು ವರದಿಯಾಗಿಲ್ಲ ಎಂಬುದು ಸಮಾಧಾನಕರ ಸಂಗತಿ.

