ಪೆರ್ಲ: ಪಡ್ರೆ ಮೊಳಕಾಲು ನಿವಾಸಿ, ಕೃಷಿಕ, ತುರ್ತು ಪರಿಸ್ಥಿತಿ ಹೋರಾಟಗಾರ ರಾಮ ಭಟ್(85)ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಶನಿವಾರ ನಿಧನರಾದರು. ತುರ್ತು ಪರಿಸ್ಥಿತಿ ಸಂದರ್ಭ 1975ರಲ್ಲಿ ಜೈಲುವಾಸವನ್ನೂ ಅನುಭವಿಸಿದ್ದರು. ಸಾಮಾಜಿಕ ಸೇವೆಗಳಲ್ಲಿ ತನ್ನನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಇವರು, ಅವಿವಾಹಿತರಾಗಿದ್ದರು.


