ಮಂಜೇಶ್ವರ: ಜಿಲ್ಲೆಯ ಅಭಿವೃದ್ಧಿ ನಕ್ಷೆಯಲ್ಲಿ ಯುವಕರ ವಿಚಾರಗಳಿಗೆ ಈಗ ಸ್ಥಾನ ಲಭಿಸಲಿದೆ. ಜಿಲ್ಲಾಡಳಿತ ಆರಂಭಿಸಿರುವ 'ನಮಸ್ತೆ ಕಲೆಕ್ಟರ್' ಯೋಜನೆಯು ಶಾಲೆಗಳ ನಂತರ ಜಿಲ್ಲೆಯ ಕಾಲೇಜುಗಳಿಗೆ ವಿಸ್ತರಿಸುತ್ತಿದೆ. ಯೋಜನೆಯ ಹೊಸ ಹಂತವನ್ನು ಉದ್ಘಾಟಿಸುತ್ತಾ, ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರ್ಕಾರಿ ಕಾಲೇಜಿನ ಎನ್ಎಸ್ಎಸ್ ಸ್ವಯಂಸೇವಕರು ಜಿಲ್ಲಾಧಿಕಾರಿ ಅರ್ಜುನ್ ಪಾಂಡಿಯನ್ ಅವರೊಂದಿಗೆ ಮುಖಾಮುಖಿಯಾಗಿ ಸಂವಾದ ನಡೆಸಿದರು.
ಮಂಜೇಶ್ವರ ಕಾಲೇಜಿನ ವಿದ್ಯಾರ್ಥಿಗಳು ಕಾಸರಗೋಡಿನ ಪ್ರವಾಸೋದ್ಯಮ ಸಾಮಥ್ರ್ಯವನ್ನು ಹೆಚ್ಚಿಸುವ ವಿಚಾರಗಳನ್ನು ಡಿಸಿ ಅವರೊಂದಿಗೆ ಹಂಚಿಕೊಂಡರು. ಪ್ರವಾಸೋದ್ಯಮದ ಜೊತೆಗೆ, ಜಿಲ್ಲೆಯ ವಿವಿಧ ವಲಯಗಳಲ್ಲಿನ ಅಭಿವೃದ್ಧಿಯ ವಿಚಾರಗಳನ್ನು ಕೂಡಾ ಚರ್ಚಿಸಲಾಯಿತು.
ಜಿಲ್ಲಾಡಳಿತ ಮತ್ತು ವಿದ್ಯಾರ್ಥಿಗಳ ನಡುವಿನ ಅಂತರವನ್ನು ಕಡಿಮೆ ಮಾಡಲು ಮತ್ತು ಆಡಳಿತ ಪ್ರಕ್ರಿಯೆಯಲ್ಲಿ ಯುವಜನರ ಭಾಗವಹಿಸುವಿಕೆಯನ್ನು ಖಚಿತಪಡಿಸಿಕೊಳ್ಳಲು ಮಾರ್ಚ್ 18 ರಂದು 'ನಮಸ್ತೆ ಕಲೆಕ್ಟರ್' ಯೋಜನೆಯನ್ನು ಪ್ರಾರಂಭಿಸಲಾಯಿತು. ಆಡಳಿತ ವ್ಯವಸ್ಥೆಗಳನ್ನು ನೇರವಾಗಿ ಅರ್ಥಮಾಡಿಕೊಳ್ಳಲು ಅವಕಾಶವನ್ನು ಒದಗಿಸುವ ಈ ಜನಪ್ರಿಯ ಯೋಜನೆಯನ್ನು ಮುಂಬರುವ ವಾರಗಳಲ್ಲಿ ಜಿಲ್ಲೆಯ ಹೆಚ್ಚಿನ ಸರ್ಕಾರಿ ಶಾಲೆಗಳು ಮತ್ತು ಕಾಲೇಜುಗಳಿಗೆ ವಿಸ್ತರಿಸಲು ನಿರ್ಧರಿಸಲಾಗಿದೆ.
ಇದಕ್ಕೂ ಮೊದಲು, ಪೈವಳಿಕೆ, ಚೆಮ್ಮನಾಡ್ ಮತ್ತು ಬಾರಾ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಗಳ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳೊಂದಿಗೆ ಸಂವಾದ ನಡೆಸಿದರು. ಜಿಲ್ಲಾಧಿಕಾರಿಗಳು ತಮ್ಮ ಕಾರ್ಯನಿರತ ಅಧಿಕೃತ ಕರ್ತವ್ಯಗಳ ನಡುವೆಯೂ ವಿದ್ಯಾರ್ಥಿಗಳ ಸಂದೇಹಗಳನ್ನು ಆಲಿಸಲು ಮತ್ತು ಅವುಗಳಿಗೆ ಉತ್ತರಿಸಲು ಸಮಯ ಕಂಡುಕೊಳ್ಳುವುದು ಕಾಲೇಜುಗಳಲ್ಲಿ ಒಂದು ದೊಡ್ಡ ಉತ್ಸಾಹವನ್ನುಂಟುಮಾಡುತ್ತಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಲು, ನೀವು ಜಛಿiಠಿಞsಜ@gmಚಿiಟ.ಛಿom ಇಮೇಲ್ ವಿಳಾಸದಲ್ಲಿ ನೋಂದಾಯಿಸಿಕೊಳ್ಳಬಹುದು.
ರಾಷ್ಟ್ರೀಯ ಹೆದ್ದಾರಿಯಿಂದ ಮಂಜೇಶ್ವರ ಕಾಲೇಜಿಗೆ ಪ್ರಯಾಣಕ್ಕೆ ಅನುಕೂಲವಾಗುವಂತೆ ಪಾದಚಾರಿ ಸೇತುವೆ ನಿರ್ಮಿಸುವಂತೆ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿದರು. ಜಿಲ್ಲಾಧಿಕಾರಿಗಳು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಪಾದಚಾರಿ ಸೇತುವೆ ನಿರ್ಮಾಣವನ್ನು ಪ್ರಾರಂಭಿಸಲು ಸೂಚಿಸಿದರು. ಶೀಘ್ರದಲ್ಲೇ ಕೆಲಸ ಪ್ರಾರಂಭವಾಗಲಿದೆ ಎಂದು ತಿಳಿಸಲಾಗಿದೆ.

.jpg)
.jpg)
